News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೊಸ ವರ್ಷಾಚರಣೆಗೆ ನಿರ್ಬಂಧವಿಲ್ಲ, ಮಾಸ್ಕ್‌ ಕಡ್ಡಾಯ: ಕೆ.ಸುಧಾಕರ್

ಬೆಂಗಳೂರು: ಜಗತ್ತಿನಾದ್ಯಂತ ಉಲ್ಬಣಗೊಳ್ಳುತ್ತಿರುವ ಕೋವಿಡ್‌ ಸಾಂಕ್ರಾಮಿಕ ಜನರಲ್ಲಿ ಆತಂಕ ಮೂಡಿಸಿದೆ. ಹೊಸ ವರ್ಷದ ಸಂಭ್ರಮದ ಮೇಲೂ ಕರಿ ನೆರಳು ಬೀರುವ ಸೂಚನೆಯಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿ ಡಾ.ಸುಧಾಕರ್‌ ಅವರು,” ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಆದರೆ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ” ಎಂದು ಹೇಳಿದ್ದಾರೆ.

ಸುಧಾಕರ್ ಅವರು ಇಂದು ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಜೊತೆ, ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ವರ್ಚುವಲ್ ಮೂಲಕ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದರು.

ಅಲ್ಲದೇ ಜನರು ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು ಎಂದ ಅವರು, ಹಿರಿಯ ನಾಗರಿಕರು, ರೋಗರುಜಿನ ಇರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನಸಂದಣಿ ಇರುವ ಸ್ಥಳಗಳಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top