News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾನವೀಯ ಪರಿಹಾರಕ್ಕಾಗಿ ಮೋದಿಗೆ ಧನ್ಯವಾದ ತಿಳಿಸಿದ ಉಕ್ರೇನ್‌ ಅಧ್ಯಕ್ಷ

ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ವಿಶ್ವಸಂಸ್ಥೆಯನ್ನು ಬೆಂಬಲಿಸುವ ಮತ್ತು ಮಾನವೀಯ ಪರಿಹಾರವನ್ನು ನೀಡಿದ್ದಕ್ಕಾಗಿ ಭಾರತವನ್ನು ಶ್ಲಾಘಿಸಿದ್ದಾರೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಸಮಯದಲ್ಲಿ ಯಾವುದೇ ಶಾಂತಿ ಪ್ರಯತ್ನಗಳನ್ನು ಭಾರತ ನಡೆಸಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಲ್ಲದೇ ಸಂತ್ರಸ್ತ ನಾಗರಿಕರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸಲು ಭಾರತದ ಬದ್ಧತೆಯನ್ನು ಪುನರುಚ್ಛರಿಸಿದ್ದಾರೆ.

ಯುದ್ಧವನ್ನು ತಕ್ಷಣವೇ ನಿಲ್ಲಿಸಲು ಮನವಿ ಭಾಡಿದ ಮೋದಿ, ತಮ್ಮ ಭಿನ್ನಾಭಿಪ್ರಾಯಗಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಎರಡೂ ಕಡೆಯವರು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳಬೇಕು ಎಂದು ಹೇಳಿದರು.

ಉಭಯ ನಾಯಕರು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಅವಕಾಶಗಳ ಬಗ್ಗೆಯೂ ಚರ್ಚಿಸಿದರು. ಈ ವರ್ಷದ ಆರಂಭದಲ್ಲಿ ಉಕ್ರೇನ್‌ನಿಂದ ಹಿಂತಿರುಗಿದ ಭಾರತೀಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲು ಉಕ್ರೇನ್ ಅಧಿಕಾರಿಗಳನ್ನು ಮೋದಿ ವಿನಂತಿಸಿದರು.

ಝೆಲೆನ್ಸ್ಕಿ ಅವರು ಭಾರತದ G20 ಪ್ರೆಸಿಡೆನ್ಸಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top