News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕರ್ನಾಟಕದ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸುವ ನಿರ್ಣಯ ಅಂಗೀಕರಿಸಿದ ಶಿಂಧೆ

ಮುಂಬೈ: ಕರ್ನಾಟಕದ ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ, ಭಾಲ್ಕಿಯದ ಪ್ರತಿ ಇಂಚು ಭೂಮಿ ಸೇರಿದಂತೆ 865 ಗ್ರಾಮಗಳನ್ನು ಮಹಾರಾಷ್ಟ್ರದ ಭಾಗವಾಗಿಸುವ ನಿರ್ಣಯವನ್ನು ಇಂದು ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ನಿರ್ಣಯವನ್ನು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

ಮುಂದಿನ ವರ್ಷ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಪ್ರವೇಶದ ಹೊರತಾಗಿಯೂ ಬಿಜೆಪಿ ಆಡಳಿತವಿರುವ ಎರಡೂ ರಾಜ್ಯಗಳ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳುತ್ತಿದೆ.

ಮಹಾರಾಷ್ಟ್ರದ ನಿರ್ಣಯವು 865 ಮರಾಠಿ ಮಾತನಾಡುವ ಹಳ್ಳಿಗಳಿದ್ದು, ಈ ಹಳ್ಳಿಗಳ ಪ್ರತಿ ಇಂಚನ್ನೂ ಮಹಾರಾಷ್ಟ್ರಕ್ಕೆ ತರಲಾಗುವುದು. ಇದಕ್ಕಾಗಿ ಸುಪ್ರೀಂಕೋರ್ಟ್‌ನಲ್ಲಿ ಏನು ಬೇಕಾದರೂ ಮಹಾರಾಷ್ಟ್ರ ಸರ್ಕಾರ ಮಾಡಲು ಸಿದ್ಧವಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರವು ಸೃಷ್ಟಿಸಿರುವ ಗಡಿ ವಿವಾದವನ್ನು ಕರ್ನಾಟಕ ಗುರುವಾರ ವಿಧಾನಸಭೆಯಲ್ಲಿ ಖಂಡಿಸಿ ನಿರ್ಣಯ ಅಂಗೀಕರಿಸಿತ್ತು.

“ಕರ್ನಾಟಕದ ನೆಲ, ಜಲ, ಭಾಷೆ ಮತ್ತು ಕನ್ನಡಿಗನ ಹಿತಾಸಕ್ತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಯಾವುದೇ ರಾಜಿ ಇಲ್ಲ, ಕರ್ನಾಟಕದ ಜನರು ಮತ್ತು ವಿಧಾನಸಭಾ ಸದಸ್ಯರ ಭಾವನೆಗಳು ಈ ವಿಷಯಗಳಲ್ಲಿ ಒಂದಾಗಿದೆ ಮತ್ತು ಇದಕ್ಕೆ ಧಕ್ಕೆಯಾದರೆ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಲು  ಬದ್ಧರಾಗಿದ್ದೇವೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಸಾಂವಿಧಾನಿಕ ಮತ್ತು ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮಹಾರಾಷ್ಟ್ರದವರು ಅನಗತ್ಯವಾಗಿ ಸೃಷ್ಟಿಸಿರುವ ಗಡಿ ವಿವಾದಗಳನ್ನು ಖಂಡಿಸಿ ಈ ಸದನವು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ ಎಂಬ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸುತ್ತದೆ” ಎಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಬೊಮ್ಮಾಯಿ ಅವರು ಕಳೆದ ಬಾರಿ ನಿರ್ಣಯ ಮಂಡಿಸಿದ್ದರು.

ಇದಕ್ಕೆ ಪ್ರತಿಯಾಗಿ ಇಂದು ಮಹಾರಾಷ್ಟ್ರ ನಿರ್ಣಯ ಅಂಗೀಕರಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top