News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮುವಿನಲ್ಲಿ 4 ಉಗ್ರರ ಎನ್‌ಕೌಂಟರ್:‌ ವೈಷ್ಣೋದೇವಿಯಲ್ಲಿ ಬಿಗಿ ಭದ್ರತೆ

ಶ್ರೀನಗರ: ಜಮ್ಮುವಿನಲ್ಲಿ ಬುಧವಾರ ನಾಲ್ವರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆಯ ಬಳಿಕ ಮಾತಾ ವೈಷ್ಣೋದೇವಿ ಸೇರಿದಂತೆ ಜಮ್ಮುವಿನ ಹಲವು ಭಾಗಗಳಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಪೋಲೀಸರ ಕ್ವಿಕ್ ರೆಸ್ಪಾನ್ಸ್ ತಂಡವು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ವೊಂದರ ಅನುಮಾನಾಸ್ಪದ ಚಲನೆಯನ್ನು ಗಮನಿಸಿ ಅದನ್ನು ಬೆನ್ನಟ್ಟಿ ಸಿದ್ರಾ ಸೇತುವೆ ಬಳಿ ತಡೆದಿದೆ. ಬಳಿಕ ಅದರಲ್ಲಿ ಅವಿತಿದ್ದ ನಾಲ್ವರು ಉಗ್ರರನ್ನು ಸದೆಬಡಿದಿದ್ದಾರೆ. ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಸಿದ್ರಾದಲ್ಲಿ ನಿನ್ನೆ ನಡೆದ ಎನ್‌ಕೌಂಟರ್ ನಂತರ, ಜಮ್ಮು ವಿಭಾಗದ ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಕಾತ್ರಾದ ಹೆಚ್ಚುವರಿ ಎಸ್.ಪಿ ಅಮಿತ್ ಭಾಸಿನ್ ಅವರು, ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವೈಷ್ಣೋದೇವಿ ದೇಗುಲದ ಮೂಲ ಶಿಬಿರವಾದ ಕತ್ರಾದಲ್ಲಿ ಹೆಚ್ಚುವರಿ ನಿಯೋಜನೆ ಮಾಡಲಾಗಿದ್ದು, ಕತ್ರಾಕ್ಕೆ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ವಾಹನಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top