News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼವಿಶ್ವಶಾಂತಿಗಾಗಿ ಹಿಂದುತ್ವʼ-ವಿಕ್ರಮದಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ಬೆಂಗಳೂರು: ವಿಕ್ರಮ ಕನ್ನಡ ವಾರಪತ್ರಿಕೆ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡಿದೆ.  ʼವಿಶ್ವಶಾಂತಿಗಾಗಿ ಹಿಂದುತ್ವʼ ಎಂಬುದು ಪ್ರಬಂಧ ಸ್ಪರ್ಧೆಯ ವಿಷಯವಾಗಿದೆ.

18 ರಿಂದ 30 ವರ್ಷದೊಳಗಿನ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪ್ರಬಂಧವನ್ನು ಬರೆಯಬಹುದು. ಸ್ವಹಸ್ತಾಕ್ಷರದ ಬರಹಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ.  2000 ಪದಗಳನ್ನು ಪ್ರಬಂಧ ಮೀರಬಾರದು ಎಂಬ ನಿಯಮ ರೂಪಿಸಲಾಗಿದೆ.

ಜನವರಿ 23 ಪ್ರಬಂಧ ಬರೆದು ಕಳುಹಿಸಲು ಇರುವ ಕೊನೆಯ ದಿನಾಂಕವಾಗಿದೆ.

ಪ್ರಥಮ ವಿಜೇತರಿಗೆ 25,000 ರೂಪಾಯಿಗಳ ಬಹುಮಾನ ದೊರೆಯಲಿದೆ. ದ್ವಿತೀಯ ವಿಜೇತರಿಗೆ 15,000 ರೂಪಾಯಿಗಳ ಬಹುಮಾನ ದೊರೆಯಲಿದೆ ಮತ್ತು ತೃತೀಯ ವಿಜೇತರಿಗೆ 10,000 ಸಾವಿರ ರೂಪಾಯಿಗಳ ಬಹುಮಾನ ದೊರೆಯಲಿದೆ. ತಲಾ 2,000 ರೂಪಾಯಿಯಂತೆ 10 ಸಮಾಧಾನಕರ ಬಹುಮಾನಗಳು ಇರಲಿವೆ.

ಕಾಲೇಜಿನ ಪ್ರಾಂಶುಪಾಲರಿಂದ ಅಥವಾ ವಿಭಾಗ ಮುಖ್ಯಸ್ಥರಿಂದ ದೃಢೀಕರಿಸಲ್ಪಟ್ಟ ವ್ಯಾಸಂಗ ಪ್ರಮಾಣ ಪತ್ರ (Study Certificate) ವನ್ನು ಮತ್ತು ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್‌ನ ಪ್ರತಿಯನ್ನು ಕಡ್ಡಾಯವಾಗಿ ಪ್ರಬಂಧದ ಜೊತೆಗೆ ಇರಿಸಬೇಕು ಎಂದು ಸೂಚನೆ ನೀಡಲಾಗಿದೆ.

ಪ್ರಬಂಧದ ಕವರ್ ಮೇಲೆ ’ಪ್ರಬಂಧ ಸ್ಪರ್ಧೆ’ ಎಂದು ನಮೂದಿಸುವಂತೆ ತಿಳಿಸಲಾಗಿದೆ.

ಪ್ರಬಂಧ ಕಳುಹಿಸಬೇಕಾದ ವಿಳಾಸ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ, ವಿಕ್ರಮ ವಾರಪತ್ರಿಕೆ,
ನಂ.106, 5ನೇ ಮುಖ್ಯರಸ್ತೆ, ಪಿ.ಬಿ.ನಂ.1804, ಚಾಮರಾಜಪೇಟೆ, ಬೆಂಗಳೂರು – 560018

ಮಾಹಿತಿಗಾಗಿ  8861875790 ಅನ್ನು ಸಂಪರ್ಕಿಸಬಹುದಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top