News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕ್‌ನಲ್ಲಿ ಹಿಂದೂ ಮಹಿಳೆಯ ಹತ್ಯೆ: ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಭಾರತ ಕರೆ

ನವದೆಹಲಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಬುಧವಾರ 40 ವರ್ಷದ ಹಿಂದೂ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಘಟನೆಯನ್ನು ಖಂಡಿಸಿರುವ ಭಾರತ, ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ  ಪಾಕಿಸ್ತಾನಕ್ಕೆ ಕರೆ ನೀಡಿದೆ.

ಕ್ರೌರ್ಯಕ್ಕೆ ಬಲಿಯಾದ ಮಹಿಳೆಯನ್ನು 40 ವರ್ಷದ ವಿಧವೆ ದಯಾ ಭೇಲ್ ಎಂದು ಗುರುತಿಸಲಾಗಿದ್ದು, ಅವರ ಶವ ಚರ್ಮ ಕಿತ್ತ ಮತ್ತು ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಈ ವರದಿಯ ಬಗ್ಗೆ ನಮಗೆ ಯಾವುದೇ ನಿರ್ದಿಷ್ಟ ವಿವರಗಳಿಲ್ಲ. ಪಾಕಿಸ್ತಾನವು ತಮ್ಮ ದೇಶದಲ್ಲಿನ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ರಕ್ಷಣೆಯ ಜವಾಬ್ದಾರಿಯನ್ನು ಹೊಂದಿದೆ” ಎಂದು ಘಟನೆಯ ಬಗ್ಗೆ ಪ್ರವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಪಾಕಿಸ್ಥಾನದ ಶಾಸಕಿ ಕೃಷ್ಣ ಕುಮಾರಿ ಅವರ ಟ್ವೀಟ್ ಪ್ರಕಾರ, “ದಯಾ ಭೇಲ್ 40 ವರ್ಷದ ವಿಧವೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ದೇಹವು ತುಂಬಾ ಕೆಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆಯ ತಲೆಯನ್ನು ದೇಹದಿಂದ ಬೇರ್ಪಡಿಸಲಾಗಿದೆ ಮತ್ತು ಕ್ರೂರರು ಇಡೀ ತಲೆಯ ಮಾಂಸವನ್ನು ತೆಗೆದುಹಾಕಿದ್ದಾರೆ. ಆಕೆಯ ಗ್ರಾಮಕ್ಕೆ ಪೊಲೀಸ್ ತಂಡಗಳು ಭೇಟಿ ನೀಡಿವೆ” ಎಂದಿದ್ದಾರೆ.

“ಪಾಕ್‌ನಲ್ಲಿ ಹಿಂದೂ ಜೀವನವು ಅತ್ಯಂತ ಕೆಟ್ಟದಾಗಿದೆ, ಇದಕ್ಕಿಂತ ಅಮಾನವೀಯವಾದದ್ದು ಯಾವುದೂ ಇಲ್ಲ. ಪಾಕಿಸ್ತಾನದ ಪರಿಸ್ಥಿತಿ ಯಾವಾಗಲೂ ಹೀಗೆಯೇ ಇತ್ತು. ಅಲ್ಪಸಂಖ್ಯಾತರು ಬಹುತೇಕ ಮುಗಿದಿದ್ದಾರೆ” ಎಂದು ಮತ್ತೊಬ್ಬರು ಟ್ವಿಟ್‌ನಲ್ಲಿ ಬರೆದಿದ್ದಾರೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮಹಿಳೆಯರನ್ನು ಗುರಿಯಾಗಿಸುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಆರಂಭದಲ್ಲಿ, ಸುಕ್ಕೂರ್ ಪಟ್ಟಣದ ರೋಹಿ ಪ್ರದೇಶದಲ್ಲಿ 18 ವರ್ಷದ ಪೂಜಾ ಓಡ್ ಎಂಬ ಹಿಂದೂ ಹುಡುಗಿಯನ್ನು ಅಪಹರಣದ ವಿಫಲ ಯತ್ನದ ನಂತರ ದಾಳಿಕೋರರು ಗುಂಡಿಕ್ಕಿ ಕೊಂದಿದ್ದರು. ಈ ಘಟನೆಯನ್ನು ಭಾರತದಲ್ಲಿ ವ್ಯಾಪಕವಾಗಿ ಖಂಡಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top