News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ ಮತ್ತು ಸೈಪ್ರಸ್ ನಡುವೆ ರಕ್ಷಣಾ ಮತ್ತು ಮಿಲಿಟರಿ ಸಹಕಾರ ಒಪ್ಪಂದ

ನವದೆಹಲಿ: ಭಾರತ ಮತ್ತು ಸೈಪ್ರಸ್ ನಿನ್ನೆ ಎರಡು ದೇಶಗಳ ನಡುವೆ ರಕ್ಷಣಾ ಮತ್ತು ಮಿಲಿಟರಿ ಸಹಕಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಒಪ್ಪಂದಗಳಿಗೆ ಸಹಿ ಹಾಕಿವೆ.

ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ವ್ಯಾಪಾರಸ್ಥರು ಮತ್ತು ವೃತ್ತಿಪರರ ಚಲನವಲನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮತ್ತು ಸಹಕಾರದ ಸಾಮಾನ್ಯ ಚೌಕಟ್ಟನ್ನು ಒದಗಿಸಲು ವಲಸೆ ಮತ್ತು ಚಲನಶೀಲತೆ ಪಾಲುದಾರಿಕೆಯ ಬಗೆಗಿನ ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಯಿತು. ಇದು ಅನಿಯಮಿತ ವಲಸೆಯನ್ನು ಎದುರಿಸಲು ಸಹ ಸಹಾಯ ಮಾಡುತ್ತದೆ.

ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಮತ್ತು ಸೈಪ್ರಸ್ ವಿದೇಶಾಂಗ ಸಚಿವರ ನಡುವಿನ ಮಾತುಕತೆಯ ನಂತರ ಒಪ್ಪಂದಗಳಿಗೆ ಸಹಿ ಹಾಕಲಾಯಿತು.

ಡಾ.ಜೈಶಂಕರ್ ಅವರು ಗುರುವಾರದಿಂದ ಮುಂದಿನ ತಿಂಗಳ 3ರವರೆಗೆ ಸೈಪ್ರಸ್ ಮತ್ತು ಆಸ್ಟ್ರಿಯಾಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ.

ಮಾತುಕತೆ ಮತ್ತು ಒಪ್ಪಂದಗಳ ವಿನಿಮಯದ ನಂತರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಡಾ.ಜೈಶಂಕರ್, ” ಇಂದಿನ ಸಭೆಯು ಭಾರತ ಮತ್ತು ಸೈಪ್ರಸ್ ನಡುವಿನ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಭಾರತ-ಸೈಪ್ರಸ್ ಪಾಲುದಾರಿಕೆಯು ಪ್ರಜಾಪ್ರಭುತ್ವ, ವೈವಿಧ್ಯತೆ ಮತ್ತು ಬಹುತ್ವದ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿದೆ. ಇತ್ತೀಚಿನ ವರ್ಷಗಳಲ್ಲಿ ಸಂಬಂಧದ ಕಾರ್ಯತಂತ್ರದ ಅಂಶಗಳು ಹೊಸ ಅರ್ಥವನ್ನು ಪಡೆದುಕೊಂಡಿವೆ” ಎಂದರು.

ನಂತರ ಎರಡನೇಹಂತವಾಗಿ ಅವರು ಆಸ್ಟ್ರಿಯಾ ಪ್ರವಾಸದ ಕೈಗೊಳ್ಳಲಿದ್ದಾರೆ. ಯುರೋಪಿಯನ್ ಮತ್ತು ಅಂತರಾಷ್ಟ್ರೀಯ ವ್ಯವಹಾರಗಳ ಆಸ್ಟ್ರಿಯಾದ ಫೆಡರಲ್ ಸಚಿವ ಅಲೆಕ್ಸಾಂಡರ್ ಶಾಲೆನ್‌ಬರ್ಗ್ ಅವರನ್ನು ಭೇಟಿಯಾಗಲಿದ್ದಾರೆ. ವಿದೇಶಾಂಗ ಸಚಿವಾಲಯದ ಪ್ರಕಾರ, ಕಳೆದ 27 ವರ್ಷಗಳಲ್ಲಿ ಭಾರತದಿಂದ ಆಸ್ಟ್ರಿಯಾಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವ ಮಟ್ಟದ ಮೊದಲ ಭೇಟಿ ಇದಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top