News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಶ್ಚಿಮಬಂಗಾಳದ ಮೊದಲ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼಗೆ ಮೋದಿ ಚಾಲನೆ

ಕೋಲ್ಕತ್ತಾ: ಬಂಗಾಳದ ಹೌರಾ ಮತ್ತು ನ್ಯೂ ಜಲ್ಪೈಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವರ್ಚುವಲ್‌ ಆಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಶ್ಚಿಮಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಪಸ್ಥಿತರಿದ್ದರು.

ವಂದೇ ಭಾರತ್ ಎಕ್ಸ್‌ಪ್ರೆಸ್ ಈಶಾನ್ಯಕ್ಕೆ ಹೆಬ್ಬಾಗಿಲು ಹೌರಾ ಮತ್ತು ನ್ಯೂ ಜಲ್ಪೈಗುರಿಯನ್ನು ಸಂಪರ್ಕಿಸುತ್ತದೆ. ಇದು ಪಶ್ಚಿಮಬಂಗಾಳ ರಾಜ್ಯದ ಮೊದಲ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ರೈಲಾಗಿದೆ.

64 ಕಿ.ಮೀ ದೂರವನ್ನು 7.45 ಗಂಟೆಗಳಲ್ಲಿ ಕ್ರಮಿಸುವ ನೀಲಿ-ಬಿಳಿ ರೈಲು ಈ ಮಾರ್ಗದ ಇತರ ರೈಲುಗಳಿಗೆ ಹೋಲಿಸಿದರೆ ಮೂರು ಗಂಟೆಗಳ ಪ್ರಯಾಣದ ಸಮಯವನ್ನು ಉಳಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಬಾರ್ಸೋಯಿ, ಮಾಲ್ಡಾ ಮತ್ತು ಬೋಲ್ಪುರ್‌ನಲ್ಲಿ ಮೂರು ನಿಲುಗಡೆಗಳನ್ನು ಹೊಂದಿದೆ.

ಮೋದಿ ತಮ್ಮ ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಈ ಕಾರ್ಯಕ್ರಮದಲ್ಲಿ ವರ್ಚುವಲ್‌ ಆಗಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ ಅವರು, “ದಯವಿಟ್ಟು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ, ನಿಮ್ಮ ತಾಯಿಯ ಸಾವಿಗೆ ಹೇಗೆ ಸಂತಾಪ ಸೂಚಿಸಬೇಕೆಂದು ನನಗೆ ತಿಳಿಯುತ್ತಿಲ್ಲ, ನಿಮ್ಮ ತಾಯಿ ನಮ್ಮ ತಾಯಿ. ನಾನು ನನ್ನ ತಾಯಿಯನ್ನು ಸಹ ಈ ವೇಳೆ ನೆನಪಿಸಿಕೊಳ್ಳುತ್ತೇನೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top