News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಹೆಚ್ಚಿಸಿದ ಕೇಂದ್ರ

ನವದೆಹಲಿ: ಭಾರತ ಸರ್ಕಾರವು 2003ರ ಜನವರಿ 1 ರಿಂದ ಪ್ರಾರಂಭವಾಗುವ ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕಕ್ಕೆ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ.

ಐದು ವರ್ಷಗಳ ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರದ ಬಡ್ಡಿ ದರವನ್ನು ಶೇ 6.8ರಿಂದ ಶೇ 7ಕ್ಕೆ ಹೆಚ್ಚಿಸಲಾಗಿದೆ.

ಹಿರಿಯ ನಾಗರಿಕರ ಉಳಿತಾಯ ಯೋಜನೆಯ ಬಡ್ಡಿ ದರವು ಶೇ.7.6 ರಿಂದ ಶೇ.8ಕ್ಕೆ ಏರಿಕೆಯಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಮಾಸಿಕ ಆದಾಯ ಖಾತೆ ಉಳಿತಾಯವನ್ನು ಶೇ 6.7 ರಿಂದ ಶೇ 7.1 ಕ್ಕೆ ಹೆಚ್ಚಿಸಲಾಗಿದೆ.

ಕಿಸಾನ್ ವಿಕಾಸ್ ಪತ್ರದ ಮೇಲಿನ ಬಡ್ಡಿ ದರವು ಈಗ ಶೇಕಡಾ 7.2 ಆಗಿರುತ್ತದೆ ಮತ್ತು 120 ತಿಂಗಳುಗಳಲ್ಲಿ ಇದು ಮೆಚ್ಯೂರ್‌ ಆಗುತ್ತದೆ. ಒಂದು ವರ್ಷದ ಅವಧಿಯ ಸಣ್ಣ ಉಳಿತಾಯ ಠೇವಣಿಯ ಬಡ್ಡಿ ದರವನ್ನು ಶೇ 5.5 ರಿಂದ ಶೇ 6.6ಕ್ಕೆ ಹೆಚ್ಚಿಸಲಾಗಿದೆ.

ಆದರೆ ಸಾರ್ವಜನಿಕ ಭವಿಷ್ಯ ನಿಧಿ ಯೋಜನೆ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆ ಮತ್ತು ಉಳಿತಾಯ ಠೇವಣಿ ಮೇಲಿನ ಬಡ್ಡಿ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top