News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

LAC ಬದಲಾಯಿಸುವ ಯಾವುದೇ ಪ್ರಯತ್ನವನ್ನು ಭಾರತ ಒಪ್ಪುವುದಿಲ್ಲ: ಜೈಶಂಕರ್

ನವದೆಹಲಿ: ಸೈಪ್ರಸ್‌ ಪ್ರವಾಸದಲ್ಲಿರುವ ಕೇಂದ್ರ ವಿದೇಶಾಂಗ ಸಚಿವ ಡಾ. ಜೈಶಂಕರ್ ಅವರು ಅಲ್ಲಿರುವ ಭಾರತೀಯ ವಲಸಿಗರ ಜೊತೆ ಸಂವಾದ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಚೀನಾದ ಮೇಲೆ ವಾಗ್ದಾಳಿ ನಡೆಸಿದರು. “ನೆರೆಯ ದೇಶ ಚೀನಾದೊಂದಿಗೆ ಭಾರತದ ಸಂಬಂಧಗಳು ಸಾಮಾನ್ಯವಾಗಿಲ್ಲ ಮತ್ತು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಚೀನಾ ಗಡಿಯಲ್ಲಿ ಭಾರತಕ್ಕೆ ಸವಾಲುಗಳು ಹೆಚ್ಚಾಗಿವೆ” ಎಂದು ಹೇಳಿದ್ದಾರೆ.

“ನಮ್ಮ ಗಡಿಯಲ್ಲಿ ನಾವು ಕೋವಿಡ್ -19 ಸಮಯದಲ್ಲಿ ತೀವ್ರ ತರನಾದ ಸವಾಲುಗಳನ್ನು ಹೊಂದಿದ್ದೇವೆ. ಚೀನಾದೊಂದಿಗಿನ ಸಂಬಂಧಗಳು ಸಾಮಾನ್ಯವಾಗಿಲ್ಲ ಏಕೆಂದರೆ ಏಕಪಕ್ಷೀಯವಾಗಿ LAC ಅನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ” ಎಂದಿದ್ದಾರೆ.

“ವಿದೇಶಾಂಗ ನೀತಿಯ, ರಾಷ್ಟ್ರೀಯ ಭದ್ರತೆಯ ಬಗ್ಗೆ ರಾಜತಾಂತ್ರಿಕತೆ, ವಿದೇಶಾಂಗ ನೀತಿಯ ದೃಢತೆಯ ಚಿತ್ರವನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಬಲ್ಲೆ, ಏಕೆಂದರೆ ಅದು ನನ್ನದು” ಎಂದು ಅವರು ಹೇಳಿದ್ದಾರೆ.

ಪಾಕಿಸ್ಥಾನವನ್ನು ಹೆಸರಿಸದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಜೈಶಂಕರ್, “ಭಾರತವು ಎಲ್ಲರೊಂದಿಗೆ ಉತ್ತಮ ನೆರೆಯ ಸಂಬಂಧವನ್ನು ಬಯಸುತ್ತದೆ. ಆದರೆ ಉತ್ತಮ ನೆರೆಹೊರೆ ಸಂಬಂಧಗಳು ಭಯೋತ್ಪಾದನೆಯನ್ನು ಕ್ಷಮಿಸುವುದು ಎಂದರ್ಥವಲ್ಲ. ನಾವು ತುಂಬಾ ಸ್ಪಷ್ಟವಾಗಿರುತ್ತೇವೆ” ಎಂದು ಅವರು ಹೇಳಿದ್ದಾರೆ.

ಭಾರತದಿಂದ ನಿರೀಕ್ಷೆಗಳ ಬಗ್ಗೆ ಮಾತನಾಡಿದ ಜೈಶಂಕರ್, ಭಾರತವನ್ನ ಸಮಸ್ಯೆಗಳನ್ನು ಪರಿಹರಿಸುವ ರಾಷ್ಟ್ರವಾಗಿ ಕಾಣುವುದರಿಂದ ಸಾಕಷ್ಟು ನಿರೀಕ್ಷೆಗಳಿವೆ. ಭಾರತವನ್ನು ಬಲಿಷ್ಠ ಆರ್ಥಿಕತೆ ಮತ್ತು ಸ್ವತಂತ್ರ ರಾಷ್ಟ್ರವಾಗಿ ನೋಡಲಾಗುತ್ತಿದೆ ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top