News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೆಎಸ್‌ಆರ್‌ಟಿಸಿಯ ಅಂತರ್ ನಗರ ಎಲೆಕ್ಟ್ರಿಕ್‌ ಬಸ್‌ ಸೇವೆಗೆ ಚಾಲನೆ

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಅಂತರ್ ನಗರ ಎಲೆಕ್ಟ್ರಿಕ್‌ ಬಸ್‌ ಸೇವೆಗೆ ಇಂದು ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗಿದೆ. ಇದರ ಪ್ರಾಯೋಗಿಕ ಸಂಚಾರ ಬೆಂಗಳೂರು ಮತ್ತು ಮೈಸೂರು ನಡುವೆ ಪ್ರಾರಂಭವಾಗಲಿದೆ.

ಭಾರತ ಸರ್ಕಾರದ ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮ್-2 ಯೋಜನೆ ಅಡಿಯಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್‍ ಚಾಲಿತ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗೊಳಿಸುವ ಗುರಿ ಹೊಂದಲಾಗಿದೆ.

ಈ ಪ್ರಾಯೋಗಿಕ ಕಾರ್ಯಾಚರಣೆಯ ಯಶಸ್ಸಿನ ನಂತರ ಬೆಂಗಳೂರಿನಿಂದ ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಮಾರ್ಗಗಳಲ್ಲಿ ಕಾರ್ಯಚರಣೆಗೊಳಿಸಲು ಯೋಜಿಸಲಾಗಿದೆ. ವಿದ್ಯುತ್ ವಾಹನಗಳ ಚಾರ್ಜಿಂಗ್‌ ಕೇಂದ್ರವನ್ನು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಎಲೆಕ್ಟ್ರಿಕ್ ಬಸ್ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಶ್ರೀರಾಮುಲು ಅವರು, ಕೇಂದ್ರ ಸರ್ಕಾರದ ಹೈಬ್ರಿಡ್ ಮತ್ತು ಎಲೆಕ್ಟ್ರಿಕ್ ವಾಹನಗಳ ವೇಗದ ಅಡಾಪ್ಷನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಫೇಮ್ II) ಯೋಜನೆಯಡಿಯಲ್ಲಿ ಕೆಎಸ್‌ಆರ್‌ಟಿಸಿಗೆ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದ್ದು, ಇದು ಮಾಲೀನ್ಯವನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಪ್ರಗತಿಪರ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top