News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಶ್ವದಾದ್ಯಂತ ಆರಂಭಗೊಂಡಿದೆ ʼಸಿರಿಧಾನ್ಯ ವರ್ಷಾಚರಣೆʼ

ನವದೆಹಲಿ: ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ – 2023 ಪ್ರಾರಂಭವಾಗಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ಭಾರತೀಯ ರಾಯಭಾರ ಕಚೇರಿಗಳು  ಕೇಂದ್ರೀಕೃತ ಚಟುವಟಿಕೆಗಳನ್ನು  ಪ್ರಾರಂಭಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಉಪಕ್ರಮ ಮತ್ತು ಭಾರತ ಸರ್ಕಾರದ ಪ್ರಸ್ತಾಪದ ಮೇರೆಗೆ ವಿಶ್ವಸಂಸ್ಥೆಯು 2023 ನೇ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿದೆ.

ಸುಸ್ಥಿರ ಕೃಷಿಯಲ್ಲಿ ಸಿರಿಧಾನ್ಯಗಳ ಮಹತ್ವದ ಪಾತ್ರ ಮತ್ತು ಸ್ಮಾರ್ಟ್ ಸೂಪರ್‌ಫುಡ್‌ನಂತೆ ಅದರ ಪ್ರಯೋಜನಗಳ ಬಗ್ಗೆ ಪ್ರಪಂಚದಾದ್ಯಂತ ಜಾಗೃತಿ ಮೂಡಿಸಲು ಈ ವರ್ಷಾಚರಣೆ ಸಹಾಯ ಮಾಡುತ್ತದೆ.

ಕೇಂದ್ರ ಸಚಿವಾಲಯಗಳು, ರಾಜ್ಯಗಳು ಮತ್ತು ಭಾರತೀಯ ರಾಯಭಾರ ಕಚೇರಿಗಳು 2023 ರಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯದ ಪ್ರಚಾರಕ್ಕಾಗಿ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ಮತ್ತು ಸಿರಿಧಾನ್ಯದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಸಜ್ಜಾಗಿದೆ. ಒಂದೊಂದು ತಿಂಗಳು ಒಂದೊಂದು ಸಚಿವಾಲಯ ಚಟುವಟಿಕೆ ಆಯೋಜಿಸಲಿದೆ.

ಜನವರಿಯಲ್ಲಿ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವಾಲಯವು ಛತ್ತೀಸ್‌ಗಢ, ಮಿಜೋರಾಂ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ  ಚಟುವಟಿಕೆಗಳನ್ನು ನಡೆಸಲಿದೆ.  15 ದಿನಗಳಲ್ಲಿ 15 ಚಟುವಟಿಕೆಗಳನ್ನು ಯೋಜಿಸಿದೆ, ಇದರಲ್ಲಿ ಕ್ರೀಡಾ ವ್ಯಕ್ತಿಗಳು, ಪೌಷ್ಟಿಕತಜ್ಞರು ಮತ್ತು ಫಿಟ್‌ನೆಸ್ ತಜ್ಞರನ್ನು ವೀಡಿಯೊ ಸಂದೇಶಗಳ ಮೂಲಕ ಜಾಗೃತಿ ಮೂಡಿಸಲಿದ್ದಾರೆ ಮತ್ತು ಪ್ರಮುಖ ಪೌಷ್ಟಿಕತಜ್ಞರು, ಆಹಾರ ತಜ್ಞರು ಮತ್ತು ಗಣ್ಯ ಕ್ರೀಡಾಪಟುಗಳೊಂದಿಗೆ ಸಿರಿಧಾನ್ಯಗಳ ಮೇಲೆ ವೆಬ್‌ನಾರ್‌ಗಳನ್ನು ಆಯೋಜಿಸಲಾಗುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top