News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಯುರ್ವೇದದಲ್ಲಿ ವೈಜ್ಞಾನಿಕ ಸಂಶೋಧನೆ ಉತ್ತೇಜಿಸಲು ‘SMART’ ಉಪಕ್ರಮ

ನವದೆಹಲಿ: ಆಯುಷ್ ಸಚಿವಾಲಯವು ಆಯುರ್ವೇದದಲ್ಲಿ ವೈಜ್ಞಾನಿಕ ಸಂಶೋಧನೆಯನ್ನು ಉತ್ತೇಜಿಸಲು ‘SMART’  ಎಂಬ ಹೊಸ ಉಪಕ್ರಮವನ್ನು ಪರಿಚಯಿಸಿದೆ.

ಈ ಕಾರ್ಯಕ್ರಮವನ್ನು ನ್ಯಾಷನಲ್ ಕಮಿಷನ್ ಫಾರ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ (NCISM) ಮತ್ತು ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS) ಪ್ರಾರಂಭಿಸಿದೆ.

NCISM ಮತ್ತು CCRAS  ವೈದ್ಯಕೀಯ ಶಿಕ್ಷಣವನ್ನು ನಿಯಂತ್ರಿಸಲು ಮತ್ತು ವೈಜ್ಞಾನಿಕ ಸಂಶೋಧನೆ ನಡೆಸಲು ಆಯುಷ್ ಸಚಿವಾಲಯದ ಅಡಿಯಲ್ಲಿನ ಪ್ರಮುಖ ಸಂಸ್ಥೆಗಳಾಗಿವೆ.

ಆಯುರ್ವೇದ ಕಾಲೇಜುಗಳು ಮತ್ತು ಆಸ್ಪತ್ರೆಗಳ ಮೂಲಕ ಆದ್ಯತೆಯ ಆರೋಗ್ಯ ಸಂಶೋಧನಾ ಕ್ಷೇತ್ರಗಳಲ್ಲಿ ವೈಜ್ಞಾನಿಕ ಸಂಶೋಧನೆಯನ್ನು ಉತ್ತೇಜಿಸಲು ‘SMART’ (Scope for Mainstreaming Ayurveda Research in Teaching Professionals)ಕಾರ್ಯಕ್ರಮ ಗುರಿಯನ್ನು ಹೊಂದಿದೆ.

ಕಾರ್ಯಕ್ರಮವನ್ನು ಸೋಮವಾರ  NCISM ಅಧ್ಯಕ್ಷ ವೈದ್ಯ ಜಯಂತ್ ದೇವಪೂಜಾರಿ ಮತ್ತು CCRAS ಡೈರೆಕ್ಟರ್ ಜನರಲ್ ರಬಿನಾರಾಯಣ ಆಚಾರ್ಯ ಪ್ರಾರಂಭಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top