News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಂಜಾಬ್‌ ಭಾರತ-ಪಾಕ್ ಗಡಿಯಲ್ಲಿ‌ ಪಾಕ್ ನುಸುಳುಕೋರನ ಸಂಹರಿಸಿದ BSF

ನವದೆಹಲಿ: ಗಡಿ ಭದ್ರತಾ ಪಡೆ ಬಿಎಸ್‌ಎಫ್ ಸಿಬ್ಬಂದಿ ಇಂದು ಪಂಜಾಬ್‌ನ ಭಾರತ – ಪಾಕ್ ಅಂತರಾಷ್ಟ್ರೀಯ ಗಡಿಯಲ್ಲಿ ಶಸ್ತ್ರಸಜ್ಜಿತ ಪಾಕಿಸ್ತಾನಿ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಅಮೃತಸರ ಜಿಲ್ಲೆಯ ದರಿಯಾ ಮನ್ಸೂರ್ ಗ್ರಾಮದ ಸಮೀಪವಿರುವ ಗಡಿ ಬೇಲಿ ಪ್ರದೇಶದ ಸುತ್ತಲೂ ಶಸ್ತ್ರಸಜ್ಜಿತ ಪಾಕಿಸ್ತಾನಿ ನುಸುಳುಕೋರರ ಅನುಮಾನಾಸ್ಪದ ಚಲನ ವಲನವನ್ನು ಸೈನಿಕರು ಗಮನಿಸಿದ್ದಾರೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

“ನಮ್ಮ ಪಡೆಗಳು ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದರೂ ಅವರು ನಿಲ್ಲದ ಕಾರಣ ಸನ್ನಿಹಿತ ಬೆದರಿಕೆಯನ್ನು ಗ್ರಹಿಸಿ ಬಿಎಸ್ಎಫ್ ಪಡೆಗಳು ದುಷ್ಕರ್ಮಿಯ ಮೇಲೆ ಗುಂಡು ಹಾರಿಸಿದರು, ನಂತರ ಆತ ಸ್ಥಳದಲ್ಲೇ ಸಾವನ್ನಪ್ಪಿದ” ಎಂದಿದ್ದಾರೆ.

ಪಾಕಿಸ್ತಾನಿ ಭಯೋತ್ಪಾದಕನ ಶವದ ಬಳಿ ಬಿಎಸ್‌ಎಫ್ ಸಿಬ್ಬಂದಿ ಬಂದೂಕು ಪತ್ತೆ ಮಾಡಿದ್ದಾರೆ. ಪ್ರಸ್ತುತ ಪ್ರದೇಶದಲ್ಲಿ ವ್ಯಾಪಕ ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಬಿಎಸ್ಎಫ್ ತಿಳಿಸಿದೆ.

ಈ ಪ್ರದೇಶದಲ್ಲಿ ಆವರಿಸಿರುವ ದಟ್ಟವಾದ ಮಂಜಿನ ಲಾಭವನ್ನು ಪಡೆದುಕೊಂಡು, ಪಾಕಿಸ್ತಾನಿ ಭಯೋತ್ಪಾದಕರ ಗುಂಪು ಪಂಜಾಬ್‌ನ ಅಂತರರಾಷ್ಟ್ರೀಯ ಗಡಿಯ ಮೂಲಕ ಭಾರತದೊಳಗೆ ನುಸುಳಲು ಪ್ರಯತ್ನಿಸುತ್ತಿದೆ ಆದರೆ ಅವರ ಪ್ರಯತ್ನವನ್ನು ಎಚ್‌ಎಸ್‌ಎಫ್ ಪಡೆಗಳು ವಿಫಲಗೊಳಿಸಿವೆ ಎಂದು ಮೂಲಗಳು ತಿಳಿಸಿವೆ.

ಬಿಎಸ್ಎಫ್ ಯೋಧರು ಗುಂಡಿನ ದಾಳಿ ನಡೆಸಿದ ನಂತರ ಕೆಲವು ಭಯೋತ್ಪಾದಕರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಇದನ್ನು ಬಿಎಸ್‌ಎಫ್ ದೃಢಪಡಿಸಿಲ್ಲ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top