News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ.5 ಮತ್ತು 6 ರಂದು ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ಜೆ.ಪಿ ನಡ್ಡಾ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಜನವರಿ 5 ಮತ್ತು 6ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ತಮಕೂರು ಮತ್ತು ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಜನವರಿ 5 ರಂದು ತುಮಕೂರಿನಲ್ಲಿ ಬಿಜೆಪಿ ಮಧುಗಿರಿ ವಿಭಾಗದ ಶಕ್ತಿ ಕೇಂದ್ರದ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಸಿದ್ದಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ. ಬಳಿಕ ಚಿತ್ರದುರ್ಗಕ್ಕೆ  ಪ್ರಯಾಣ ಮಾಡಲಿದ್ದಾರೆ.

ಚಿತ್ರದುರ್ಗದಲ್ಲಿ ಡಿಸಿ ಕಚೇರಿಯಲ್ಲಿ ವೀರಮದಕರಿ, ಒನಕೆ ಓಬವ್ವ, ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಅನುಭವ ಮಂಟಪದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.  ನಂತರ ಮಾದಾರ ಚೆನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬಳಿಕ ಸಿರಿಗೆರೆ ತರಳಬಾಳು ಮಠಕ್ಕೂ ಭೇಟಿ ನೀಡಲಿದ್ದಾರೆ. ನಂತರ  ರಾತ್ರಿ ದಾವಣಗೆರೆ ವಿಭಾಗದ ಬಿಜೆಪಿ ಸಂಸದರು, ಶಾಸಕರು, ಪರಿಷತ್ ಸದಸ್ಯರು ಜಿಲ್ಲಾ ಘಟಕದ ಅಧ್ಯಕ್ಷರ ಜೊತೆ ಸಭೆ ನಡೆಸಲಿದ್ದಾರೆ.‌

ಜನವರಿ 6ಕ್ಕೆ ಬೆಳಗ್ಗೆ ಹರಿಹರದ ಪಂಚಮಸಾಲಿ ಮಠಕ್ಕೆ  ಭೇಟಿ, ನಂತರ ಬೆಲ್ಲೂಡಿ ಕನಕಗುರು ಪೀಠಕ್ಕೆ ಮತ್ತು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಲಿದ್ದಾರೆ. ದಾವಣಗೆರೆಯ ತ್ರಿಶೂಲ ಕಾಲ ಭವನದಲ್ಲಿ ವಿವಿಧ ವಲಯಗಳ ತಜ್ಞರು ಮತ್ತು ಪ್ರಮುಖರ ಜೊತೆಗೆ ಸಭೆ ನಡೆಸಿ ಅಲ್ಲಿಂದ ಮತ್ತೆ ತುಮಕೂರಿಗೆ ವಾಪಸ್ ಪ್ರಯಾಣಿಸಲಿದ್ದಾರೆ.

ತುಮಕೂರಿನ ಪ್ರೆಸಿಡೆನ್ಸಿ ಸ್ಕೂಲ್ ಮೈದಾನದಲ್ಲಿ ಅವರು ಸಾರ್ವಜನಿಕ ಬಹಿರಂಗ ಸಭೆ ನಡೆಸಲಿದ್ದು, 25 ಸಾವಿರ ಕಾರ್ಯಕರ್ತರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top