News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಛತ್ತೀಸ್‌ಗಢ: ಮತಾಂತರ ವಿರೋಧಿಸಿದ ಆದಿವಾಸಿಗಳ ಮೇಲೆ ಮಿಷನರಿಗಳ ಹಲ್ಲೆ

ನಾರಾಯಣಪುರ: ಆದಿವಾಸಿಗಳನ್ನು ಕ್ರಿಶ್ಚಿಯನ್ ಮತಕ್ಕೆ ಅಕ್ರಮವಾಗಿ ಮತ್ತು ಬಲವಂತವಾಗಿ ಮತಾಂತರ ನಡೆಸುವುದರ ವಿರುದ್ಧ ಛತ್ತೀಸ್‌ಗಢದ ಬಸ್ತಾರ್‌ನ ನಾರಾಯಣಪುರ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆಯುತ್ತಿವೆ. ಆದಿವಾಸಿ ಸಮುದಾಯದವರು ಕ್ರೈಸ್ಥ ಧರ್ಮ ಪ್ರಚಾರಕರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಆದರೆ ಪ್ರತಿಭಟನೆಯ ಸಂದರ್ಭದಲ್ಲಿ ಆದಿವಾಸಿಗಳು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ ಎಂಬ ಬಗ್ಗೆ ಮುಖ್ಯವಾಹಿನಿಯ ಮಾಧ್ಯಮಗಳು ಅರೆಬೆಂದ ಸತ್ಯವನ್ನು ಬಿತ್ತರಿಸುತ್ತಿವೆ. ಆದರೆ ಸತ್ಯಾಂಶ ಬೇರೆಯೇ ಇದ್ದು ಮಿಷನರಿಗಳೇ ಆದಿವಾಸಿಗಳ ಮೇಲೆ ದಾಳಿ ನಡೆಸಿದ್ದಾರೆ.

ಬುಡಕಟ್ಟು ಸಮುದಾಯಗಳ ಸದಸ್ಯರು ಧಾರ್ಮಿಕ ಮತಾಂತರಗಳ ವಿರುದ್ಧ ಪ್ರತಿಭಟನಾ ಸಮಾವೇಶಗಳನ್ನು ನಡೆಸಿದ್ದಾರೆ. ಈ ವೇಳೆ ಬುಡಕಟ್ಟು ಗುಂಪುಗಳು ಮತ್ತು ಕ್ರಿಶ್ಚಿಯನ್ ಮಿಷನರಿಗಳ ನಡುವೆ ಘರ್ಷಣೆಗಳು ನಡೆದಿವೆ. ಆದರೆ, ಈ ಪ್ರತಿಭಟನೆಯ ವೇಳೆ ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿ ಪರಿಸ್ಥಿತಿ ಹದಗೆಟ್ಟಿದೆ.

ಮಾಧ್ಯಮಗಳು ಬುಡಕಟ್ಟು ಜನರೇ ಚರ್ಚ್‌ ಮೇಲೆ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬಂತೆ ಬಿಂಬಿಸಿವೆ. ಆದರೆ ಅಕ್ರಮ ಮತಾಂತರದ ಬಗ್ಗೆ ವರದಿ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಬರುತ್ತಿವೆ. ಎಸ್‌ಪಿ ಸದಾನಂದ್ ಕುಮಾರ್ ಅವರು ಕೂಡ ಮತಾಂತರಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆದಿವಾಸಿಗಳು ಆರೋಪಿಸುತ್ತಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top