ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಖಿಲ ಭಾರತ ಜಲ ಮಂತ್ರಿಗಳ ಸಭೆಯನ್ನು ಉದ್ದೇಶಿಸಿ ‘ಜಲ ದೃಷ್ಟಿ@2047’ ವಿಷಯದ ಕುರಿತು ಮಾತನಾಡಿದ್ದಾರೆ. ಈ ಸಭೆ “ಸುಸ್ಥಿರ ಅಭಿವೃದ್ಧಿಗಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮಾರ್ಗಗಳು” ಕುರಿತು ಚರ್ಚಿಸಲು ಪ್ರಮುಖ ನೀತಿ ನಿರೂಪಕರನ್ನು ಒಟ್ಟುಗೂಡಿಸುತ್ತದೆ.
“ನಮ್ಮ ಸಾಂವಿಧಾನಿಕ ವ್ಯವಸ್ಥೆಯಲ್ಲಿ ನೀರಿನ ವಿಷಯ ರಾಜ್ಯಗಳ ನಿಯಂತ್ರಣದಲ್ಲಿದೆ. ನೀರಿನ ಸಂರಕ್ಷಣೆಗಾಗಿ ರಾಜ್ಯಗಳ ಪ್ರಯತ್ನಗಳು ದೇಶದ ಸಾಮೂಹಿಕ ಗುರಿಗಳನ್ನು ಸಾಧಿಸುವಲ್ಲಿ ಬಹಳ ದೂರ ಸಾಗುತ್ತವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಭಾರತವು ಜಲ ಭದ್ರತೆಯಲ್ಲಿ ಪ್ರಮುಖ ದಾಪುಗಾಲು ಇಟ್ಟಿದೆ. 2047 ರತ್ತ ನಮ್ಮ ಜಲ ದೃಷ್ಟಿ ಅಮೃತ ಕಾಲಕ್ಕೆ ದೊಡ್ಡ ಕೊಡುಗೆಯಾಗಲಿದೆ. ಪ್ರತಿ ಜಿಲ್ಲೆಯಲ್ಲಿ 75 ಅಮೃತ ಸರೋವರಗಳನ್ನು ನಿರ್ಮಿಸಲು ರಾಷ್ಟ್ರವು ಒಟ್ಟಾಗಿ ಕೆಲಸ ಮಾಡುತ್ತಿದೆ. ಇಲ್ಲಿಯವರೆಗೆ 25,000 ಅಮೃತ ಸರೋವರಗಳನ್ನು ಈಗಾಗಲೇ ನಿರ್ಮಿಸಲಾಗಿದೆ” ಎಂದು ಅವರು ಹೇಳಿದ್ದಾರೆ.
ಕೇಂದ್ರ ಜಲ ಶಕ್ತಿ ಸಚಿವಾಲಯವು ಜನವರಿ 5-6 ರಿಂದ ಭೋಪಾಲ್ನಲ್ಲಿ ‘ವಾಟರ್ ವಿಷನ್@2047’ ವಿಷಯದ ಮೇಲೆ ನೀರಿನ ಕುರಿತು ರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಆಯೋಜಿಸುತ್ತಿದೆ.
.@PMOIndia Sh. @narendramodi to virtually address 1st All India Annual State Ministers Conference On Water vision@2047 #AmritKaal
States To Deliberate on #Water Vision@2047 during 2 days conference as part of India@2047@gssjodhpur @ChouhanShivraj @prahladspatel @Dev_Fadnavis pic.twitter.com/9sTQIrsgr3
— PIB •Jal Shakti Ministry• #AmritMahotsav (@PIBWater) January 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.