News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉತ್ತರಾಖಂಡದ ಜೋಶಿಮಠದಲ್ಲಿ ಕುಸಿಯುತ್ತಿದೆ ಭೂಮಿ, ಮನೆಗಳಲ್ಲಿ ಬಿರುಕು

ಕತಿಮ: ಉತ್ತರಾಖಂಡದ ಜೋಶಿಮಠದಲ್ಲಿ ಭೂಮಿ ಕುಸಿಯಲಾರಂಭಿಸಿದೆ ಎಂಬ ಸುದ್ದಿಯ ನಡುವೆಯೇ ಅಲ್ಲಿನ ಹಲವಾರು ಮನೆಗಳಲ್ಲಿ ಬಿರುಕು ಮೂಡಲಾರಂಭಿಸಿದೆ. ಈ ಪಟ್ಟಣದ ಹಲವು ಮನೆಗಳ ಗೋಡೆ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರನ್ನು ರಕ್ಷಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉತ್ತರಕನ್ನಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಸಿಎಂ ಧಾಮಿ ಶೀಘ್ರದಲ್ಲೇ ಜೋಶಿಮಠಕ್ಕೆ ಭೇಟಿ ನೀಡಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಅಗತ್ಯ ಕ್ರಮಗಳನ್ನು ಪ್ರಾರಂಭಿಸಲಿದ್ದಾರೆ. ಭೂ ಕುಸಿತದಿಂದಾಗಿ ಆ ಪ್ರದೇಶದ ಮನೆಗಳಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡಿರುವ ವರದಿಗಳು ಸಹಜವಾಗಿಯೇ ಆತಂಕವನ್ನು ಮೂಡಿಸಿದೆ.

ಮುಂದಿನ ದಿನಗಳಲ್ಲಿ ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸಲು ಕ್ರಮಕೈಗೊಳ್ಳುತ್ತೇನೆ. ಎಲ್ಲಾ ವರದಿಗಳ ಮೇಲೆ ನಿಗಾ ವಹಿಸಲಾಗುವುದು ಮತ್ತು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಜೋಶಿಮಠ ಪುರಸಭೆ ಅಧ್ಯಕ್ಷ ಶೈಲೇಂದ್ರ ಪವಾರ್ ಮಾತನಾಡಿ, ಮಾರ್ವಾಡಿ ವಾರ್ಡ್‌ನಲ್ಲಿ ಅಂತರ್ಜಲದಲ್ಲಿ ನೀರು ಸೋರಿಕೆಯಾಗಿ ಮನೆಗಳಲ್ಲಿ ಭಾರಿ ಬಿರುಕು ಕಾಣಿಸಿಕೊಂಡಿದೆ‌ ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top