News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಗ್ನಿವೀರರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾದ ರಾಹುಲ್‌ ಗಾಂಧಿ

ನವದೆಹಲಿ: ಭಾರತೀಯ ಸೇನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಮುಳುಗುತ್ತಿರುವ ತಮ್ಮ ಪಕ್ಷವನ್ನು ಪುನಃಶ್ಚೇತನಗೊಳಿಸುವ ಪ್ರಯತ್ನವಾಗಿ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಅವರು ಸೇನೆಯ ವಿರುದ್ಧ ಮಾತನಾಡಿ ಜನರ ಆಕ್ರೋಶಕ್ಕೆ ತುತ್ತಾಗುತ್ತಿದ್ದಾರೆ.

ಇದೀಗ ಅವರು ಭಾರತ ಸರ್ಕಾರದ ಅಗ್ನಿವೀರ್‌ ಯೋಜನೆಗಳ ಬಗ್ಗೆ ಕುಹಕವಾಡಿದ್ದು, ಭಾರತ ಸರ್ಕಾರವು ನಾಲ್ಕು ವರ್ಷಗಳ ಸೇವೆಯ ನಂತರ ಅಗ್ನಿವೀರರನ್ನು ಚಪ್ಪಲಿಯಲ್ಲಿ ಹೊಡೆದು ಹೊರಹಾಕುತ್ತದೆ ಎಂದು ಹೇಳಿದ್ದಾರೆ.

ಗುರುವಾರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಹಿಂದೆ ಯುವಕರು ಸೇನೆಯಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಬಹುದು ಮತ್ತು ಪಿಂಚಣಿ ಪಡೆಯಬಹುದಿತ್ತು. ಆದರೀಗ ಮೋದಿ ಸರ್ಕಾರ 15 ವರ್ಷಗಳ ವಿಷಯ ಬಿಡಿ, ಪಿಂಚಣಿ ವಿಷಯ ಬಿಡಿ. ನಾಲ್ಕು ತಿಂಗಳು ತರಬೇತಿ ನೀಡಿ, ಬಂದೂಕು ಹಿಡಿದುಕೊಳ್ಳಿ, ನಾಲ್ಕು ವರ್ಷ ಇರಿ, ನಂತರ ನಾವು ನಿಮ್ಮನ್ನು ಚಪ್ಪಲಿಯಲ್ಲಿ ಹೊಡೆದು ಹೊರಹಾಕುತ್ತೇವೆ ಎನ್ನುತ್ತಿದೆ ” ಎಂದಿದ್ದಾರೆ.

ಈ ಹಿಂದೆ ಅವರು ಚೀನಾ ಸೈನಿಕರು ಭಾರತೀಯ ಯೋಧರನ್ನು ಹೊಡೆದು ಕಳುಹಿಸಿದ್ದಾರೆ ಎಂದು ಜನರ ಭಾವನೆಗೆ ಧಕ್ಕೆಯುಂಟು ಮಾಡಿದ್ದರು.

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು  ರಾಹುಲ್ ಗಾಂಧಿಯವರ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿದ್ದು, “ರಾಹುಲ್ ಗಾಂಧಿ ಅವರು ಭಾರತೀಯ ಸೇನೆಯನ್ನು ಅವಮಾನಿಸುತ್ತಿರುವುದು ಮಾತ್ರವಲ್ಲ ದೇಶದ ಪ್ರತಿಷ್ಠೆಗೆ ಹಾನಿ ಮಾಡುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಮಸ್ಯೆಯಲ್ಲ,  ದೇಶಕ್ಕೆಯೇ ದೊಡ್ಡ ಮುಜುಗರವಾಗಿದ್ದಾರೆ ”ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top