News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉತ್ತರಾಖಂಡ ಜೋಶಿಮಠದಲ್ಲಿ ಮುಂದುವರೆದ ಭೂಮಿಯ ಕುಸಿತ: ಜನರ ರಕ್ಷಣೆ

ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲಾಡಳಿತವು ಜೋಶಿಮಠ ಪಟ್ಟಣದಲ್ಲಿ ಭೂಮಿ ಕುಸಿತ ಮುಂದುವರಿದ ಹಿನ್ನೆಲೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೋಶಿಮಠದಲ್ಲಿ ಭೂಮಿ ಕುಸಿತದಿಂದ ಮನೆ ಬಿರುಕು ಬಿಟ್ಟಿರುವ ಜನರನ್ನು ಅಧಿಕಾರಿಗಳು ಸ್ಥಳಾಂತರ ಮಾಡಲಾಗಿದೆ.

ಚಮೋಲಿ ಜಿಲ್ಲೆಯ ಜೋಶಿಮಠ ಪಟ್ಟಣವು ಈ ಪ್ರದೇಶದಲ್ಲಿ ತೀವ್ರ ಭೂಕುಸಿತವನ್ನು ಕಾಣುತ್ತಿದೆ ಮತ್ತು ಅದರ ಎಲ್ಲಾ ವಾರ್ಡ್‌ಗಳು ವಿಪತ್ತಿನಿಂದ ಅಪಾಯ ಎದುರಿಸುತ್ತಿವೆ. ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆಯ ಪ್ರಕಾರ, ಜೋಶಿಮಠದಲ್ಲಿ ನಿರಂತರವಾಗಿ ಭೂಮಿ ಕುಸಿತದ ಪರಿಣಾಮವಾಗಿ 550 ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕುಗಳು ಉಂಟಾಗಿವೆ . ಈ ಭಾಗದ ಜನರ ಜೀವಕ್ಕೆ ಅಪಾಯವಿರುವ ಹಿನ್ನೆಲೆಯಲ್ಲಿ ಜೋಶಿಮಠದಲ್ಲಿ ಜಿಲ್ಲಾಡಳಿತ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಜನರನ್ನು ನಗರಸಭೆಯ ರಾತ್ರಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗಿದೆ.

ಜೋಶಿಮಠದಲ್ಲಿ ಮುಂದುವರಿದ ಭೂಕುಸಿತದ ಕುರಿತು ಮಾತನಾಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸುವುದಾಗಿ ಹೇಳಿದ್ದಾರೆ.

ಜೋಶಿಮಠದಲ್ಲಿ ಭೂಕುಸಿತ, ಮನೆ ಬಿರುಕು ಬಿಟ್ಟಿರುವ ಕುರಿತು ಇಂದು ಸಂಜೆ ಡೆಹ್ರಾಡೂನ್‌ನಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸುತ್ತೇನೆ, ಜನರಿಗೆ ಹೇಗೆ ಸಹಾಯ ಮಾಡಬೇಕು, ಅವರಿಗೆ ಪುನರ್ವಸತಿ ಹೇಗೆ ಮತ್ತು ಪಟ್ಟಣವನ್ನು ಉಳಿಸುವುದು ಹೇಗೆ ಎಂದು ಚರ್ಚಿಸುತ್ತೇವೆ. ಈಗಾಗಲೇ ಅಧಿಕಾರಿಗಳು ಪಟ್ಟಣದಲ್ಲಿ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಬಿಜೆಪಿ ನಿಯೋಗವನ್ನು ಸಹ ಅಲ್ಲಿಗೆ ಕಳುಹಿಸಲಾಗಿದೆ” ಎಂದು ಸಿಎಂ ಧಾಮಿ ಹೇಳಿದ್ದಾರೆ.

ಶನಿವಾರ ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವುದಾಗಿ ಸಿಎಂ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top