News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂಡಮಾನ್ & ನಿಕೋಬಾರ್ ಕಮಾಂಡ್ ಕಾರ್ಯಾಚರಣೆ ಸಿದ್ಧತೆ ಪರಿಶೀಲಿಸಿದ ರಾಜನಾಥ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಪೋರ್ಟ್ ಬ್ಲೇರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ (ANC) ಕಾರ್ಯಾಚರಣೆಯ ಪ್ರದೇಶಗಳಲ್ಲಿ ಕಾರ್ಯಾಚರಣೆಯ ಸಿದ್ಧತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಯನ್ನು ಪರಿಶೀಲಿಸಿದರು.

ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ ಪ್ರಸ್ತುತ ಭಾರತೀಯ ಸಶಸ್ತ್ರ ಪಡೆಗಳ ಏಕೈಕ ಕ್ರಿಯಾತ್ಮಕ ಜಂಟಿ ಸೇವೆಗಳ ಥಿಯೇಟರ್ ಕಮಾಂಡ್ ಆಗಿದೆ.

 ಕಮಾಂಡರ್-ಇನ್-ಚೀಫ್ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ (CINCAN) ಲೆಫ್ಟಿನೆಂಟ್ ಜನರಲ್ ಅಜಯ್ ಸಿಂಗ್  ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ದ್ವೀಪ ಸಮೂಹದ ಭೌಗೋಳಿಕ-ಕಾರ್ಯತಂತ್ರದ ಪ್ರಾಮುಖ್ಯತೆ ಮತ್ತು ಒದಗಿಸಲಾದ ವ್ಯವಸ್ಥಾಪನಾ ಮತ್ತು ಆಡಳಿತಾತ್ಮಕ ಬೆಂಬಲದ ಜೊತೆಗೆ ಈ ಪ್ರದೇಶದಲ್ಲಿ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆಗಳಿಗೆ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ ಮೂಲಕ ಭಾರತದ ಪ್ರಭಾವವನ್ನು ಹೆಚ್ಚಿಸುವಲ್ಲಿ ಅದರ ಪಾತ್ರದ ಬಗ್ಗೆ ವಿವರಿಸಿದರು.

DRaS ಭಾರತೀಯ ಥಿಂಕ್ ಟ್ಯಾಂಕ್ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ ಭಾರತದ ಕಡಲ ಸಾಮರ್ಥ್ಯಗಳನ್ನು ವಿಸ್ತರಿಸುವುದರ ಮೂಲಕ ಬಲ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ದಕ್ಷಿಣ ಏಷ್ಯಾದ ಕಡಲ ಪ್ರದೇಶದಲ್ಲಿ ಚೀನಾದ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳ  ಮೇಲೆ ಕಣ್ಗಾವಲು ಇಡಲು ಪರಿಣಾಮಕಾರಿ ಭೌಗೋಳಿಕ-ಕಾರ್ಯತಂತ್ರದ ತಾಣವಾಗಿ ಕಾರ್ಯನಿರ್ವಹಿಸುತ್ತದೆ.

ಇದಲ್ಲದೆ, ಹಿಂದೂ ಮಹಾಸಾಗರ ಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆ ಚಟುವಟಿಕೆಗಳು ಮತ್ತು ಗುಟ್ಟಾಗಿ ಸಮೀಕ್ಷೆ ಕಾರ್ಯಾಚರಣೆಗಳಂತಹ ಚೀನಾದ ನೀಚ ಕೃತ್ಯಗಳು ಈ ಪ್ರದೇಶದಲ್ಲಿ ದೀರ್ಘಾವಧಿಯ ಆರ್ಥಿಕ ಸ್ಥಿರತೆಗೆ ಬೆದರಿಕೆಯನ್ನುಂಟುಮಾಡುತ್ತವೆ ಮತ್ತು ಭಾರತದ ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡುತ್ತವೆ. ಇದನ್ನು ತಡೆಯುವಲ್ಲಿಯೂ ಕಮಾಂಡ್‌ ಮಹತ್ವದ ಕಾರ್ಯ ನಿರ್ವಹಿಸುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top