News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಜೆಪಿ ಮಣಿಪುರವನ್ನು ಬಂದ್‌ ಮತ್ತು ಭಯೋತ್ಪಾದನೆಯಿಂದ ಮುಕ್ತಗೊಳಿಸಿದೆ: ಅಮಿತ್‌ ಶಾ

ಇಂಫಾಲ: ಬಿಜೆಪಿ ಸರ್ಕಾರವು ಮಣಿಪುರವನ್ನು ಬಂದ್‌ಗಳು ಮತ್ತು ಭಯೋತ್ಪಾದನೆಯಿಂದ ಮುಕ್ತಗೊಳಿಸಿ ಅಭಿವೃದ್ಧಿ ಪಥದತ್ತ ತಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.

ಇಂದು 1,300 ಕೋಟಿ ರೂಪಾಯಿಗೂ ಅಧಿಕ ಮೊತ್ತದ 21 ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ನಂತರ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್‌ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಶಾ, ಬಿಜೆಪಿ ಸರ್ಕಾರವು ಬಂಡಾಯವನ್ನು ಸೋಲಿಸಿತು ಮತ್ತು ರಾಜ್ಯದ ಆರು ಜಿಲ್ಲೆಗಳಿಂದ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ ಅಥವಾ AFSPA ಅನ್ನು ತೆಗೆದುಹಾಕಿತು ಎಂದಿದ್ದಾರೆ.

”ಮಣಿಪುರದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆಯ ಪರಿಸ್ಥಿತಿ ಇತ್ತು. ಈಗ, ಅತ್ಯುತ್ತಮ ಆಡಳಿತವಿರುವ ಸಣ್ಣ ರಾಜ್ಯಗಳಲ್ಲಿ ಒಂದಾಗಿದೆ” ಎಂದು ಅವರು ಹೇಳಿದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಎಂಟು ವರ್ಷಗಳಿಂದ ಈಶಾನ್ಯದಲ್ಲಿ 3.45 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಿದೆ ಮತ್ತು ಈ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 51 ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದರು.

ಮೋದಿ ಸರ್ಕಾರದ ಅಡಿಯಲ್ಲಿ ರಸ್ತೆ, ರೈಲು ಮತ್ತು ವಿಮಾನ ಸಂಪರ್ಕವು ಹಲವು ಪಟ್ಟು ಹೆಚ್ಚಾಗಿದೆ ಎಂದು ಶಾ ಹೇಳಿದರು.

”ಕಾಂಗ್ರೆಸ್‌ನ ‘ಲುಕ್ ಈಸ್ಟ್ ಪಾಲಿಸಿ’ಯನ್ನು ‘ಆಕ್ಟ್ ಈಸ್ಟ್ ಪಾಲಿಸಿ’ ಆಗಿ ಪರಿವರ್ತಿಸಿದ್ದೇವೆ. ನಾವು ಭರವಸೆ ನೀಡಿದ್ದನ್ನು ಮಾಡುತ್ತೇವೆ,” ಎಂದರು.

ರಾಜ್ಯದಲ್ಲಿ ಎನ್ ಬಿರೇನ್ ಸಿಂಗ್ ಸರ್ಕಾರ ಮಾದಕ ವಸ್ತು ಕಳ್ಳಸಾಗಣೆ ಮತ್ತು ದುರುಪಯೋಗದ ವಿರುದ್ಧ ಬೃಹತ್ ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಿದೆ ಎಂದ ಅವರು, ಮುಂದಿನ ಚುನಾವಣೆಯ ವೇಳೆಗೆ ಬಿಜೆಪಿ ಮಣಿಪುರವನ್ನು ಮಾದಕ ದ್ರವ್ಯ ಮುಕ್ತವನ್ನಾಗಿ ಮಾಡಲಿದೆ ಎಂದು ಹೇಳಿದರು.

ಶಾ ಅವರು 300 ಕೋಟಿ ರೂಪಾಯಿ ಮೌಲ್ಯದ 12 ಯೋಜನೆಗಳನ್ನು ಉದ್ಘಾಟಿಸಿದರು ಮತ್ತು 1,007 ಕೋಟಿ ರೂಪಾಯಿ ಮೌಲ್ಯದ ಒಂಬತ್ತು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top