News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕುಸಿಯುತ್ತಿದೆ ಜೋಶಿಮಠ: ಅಧ್ಯಯನಕ್ಕೆ ಉನ್ನತ ಸಮಿತಿ ರಚಿಸಿದ ಕೇಂದ್ರ

ನವದೆಹಲಿ: ಉತ್ತರಾಖಂಡದ ಜೋಶಿಮಠ ಪಟ್ಟಣವೇ ಕುಸಿಯುತ್ತಿದ್ದು ಅಪಾಯಕಾರಿ ಮಟ್ಟವನ್ನು ತಲುಪಿದೆ. ಅಲ್ಲಿನ ಸುಮಾರು 600 ಕುಟುಂಬಗಳ ಸ್ಥಳಾಂತರ ಕಾರ್ಯ ಕ್ಷಿಪ್ರವೇಗದಲ್ಲಿ ನಡೆಯುತ್ತಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತಿರುವ ಕೇಂದ್ರ ಸರ್ಕಾರ ಭೂಕುಸಿತ ಮತ್ತು ಅದರ ಪರಿಣಾಮಗಳ ಕುರಿತು ಕ್ಷಿಪ್ರ ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ.

ಜೋಶಿ ಮಠದ ಭೂಕುಸಿತ ಮತ್ತು ಅದರ ಪರಿಣಾಮಗಳ ಬಗ್ಗೆ ಕ್ಷಿಪ್ರ ಅಧ್ಯಯನ ನಡೆಸಿ ಕಾರಣವನ್ನು ಪತ್ತೆ ಮಾಡಲು ಪರಿಸರ ಮತ್ತು ಅರಣ್ಯ ಸಚಿವಾಲಯ, ಕೇಂದ್ರ ಜಲ ಆಯೋಗ, ಭಾರತೀಯ ಭೂ ವೈಜ್ಞಾನಿಕ ಸಮೀಕ್ಷೆ ಮತ್ತು ಗಂಗಾ ಶುದ್ಧೀಕರಣಕ್ಕಾಗಿನ ರಾಷ್ಟ್ರೀಯ ಮಿಷನ್‌ನ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ಕೇಂದ್ರ ಸರ್ಕಾರ ರಚನೆ ಮಾಡಿದೆ.

ಮೂರು ದಿನಗಳಲ್ಲಿ ವರದಿ ನೀಡುವಂತೆ ಈ ಸಮಿತಿಗೆ ಸೂಚನೆ ನೀಡಲಾಗಿದೆ ಎಂದು ಜಲ ಶಕ್ತಿ ಸಚಿವಾಲಯ ಹೊರಡಿಸಿದ ಜ್ಞಾಪಕ ಪತ್ರದಲ್ಲಿ ತಿಳಿಸಲಾಗಿದೆ.

ಭೂಮಿ ಕುಸಿದಿರುವ ಕಾರಣ ಜೋಶಿ ಮಠದ ಬಹುತೇಕ ಮನೆಗಳು ಬಿರುಕು ಬಿಟ್ಟಿವೆ, ಭೂಮಿ ಕುಸಿಯುತ್ತಿದೆ. ಮಣ್ಣಿನ ಅಡಿಯಿಂದ ನೀರು ಜಿನುಗುತ್ತಿದೆ ಮತ್ತು ಮೇಲ್ಮಣ್ಣು ಸವೆದು ಹೋಗುತ್ತಿದೆ. ಇದರಿಂದ ಕಟ್ಟಡಗಳು, ಹೆದ್ದಾರಿಗಳು, ಮೂಲಸೌಕರ್ಯ ಮತ್ತು ನದಿ ವ್ಯವಸ್ಥೆ ಮೇಲೆ ಆಗುವ ಪರಿಣಾಮಗಳನ್ನು ಸಮಿತಿ ಪರಿಶೀಲಿಸಲಿದೆ.

ಮನುಷ್ಯ ಪ್ರಕೃತಿಯ ಮೇಲೆ ನಡೆಸಿದ ನಿರಂತರ ದಬ್ಬಾಳಿಕೆಯೇ ಇಂತಹ ಅನಾಹುತಗಳಿಗೆ ದಾರಿಮಾಡಿಕೊಟ್ಟಿದೆ ಎಂಬುದು ಇಲ್ಲಿ ಸ್ಪಷ್ಟವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top