News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಷ್ಟ್ರೀಯ ಯುವಜನೋತ್ಸವ ಲೋಗೋ ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಜನವರಿ 12 ರಿಂದ 16 ರವರೆಗೆ  ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಮತ್ತು ಮ್ಯಾಸ್ಕಟ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಸಂದರ್ಭದಲ್ಲಿ ವರ್ಚುವಲ್‌ ಆಗಿ ಉಪಸ್ಥಿತರಿದ್ದರು.

ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿ, “ಈ ಹಿಂದೆ ರಾಜ್ಯವು ಆಯೋಜಿಸಿದ್ದ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯದ ಕ್ರೀಡಾಕೂಟದ ಮಾದರಿಯಲ್ಲಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಯುವಜನೋತ್ಸವದ ಸಂದರ್ಭದಲ್ಲಿ ಯುವ ಶಾಸಕರ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ” ಎಂದರು.

ದೇಶಾದ್ಯಂತ ರೈಲಿನಲ್ಲಿ ಧಾರವಾಡಕ್ಕೆ ಬರುವ ಸ್ಪರ್ಧಿಗಳಿಗೆ ವಿಶೇಷ ಬೋಗಿಗಳನ್ನು ನಿಗದಿಪಡಿಸುವುದಾಗಿ ರೈಲ್ವೆ ಮಂಡಳಿ ಪ್ರಕಟಿಸಿದೆ.

ಲೋಗೋ ವಿನ್ಯಾಸ ಮಾಡಿದ ಒರಿಸ್ಸಾದ ಬನ್ಸಿಲಾಲ್ ಕೇತ್ಕಿ ಅವರಿಗೆ ಕೇಂದ್ರ ಕ್ರೀಡಾ ಸಚಿವರು 50000 ರೂಪಾಯಿಗಳ ನಗದು ಬಹುಮಾನವನ್ನು ಘೋಷಿಸಿದರು, ಅವರ ಲೋಗೋ ವಿನ್ಯಾಸವನ್ನು ಯುವಜನೋತ್ಸವ ಸಮಿತಿಯು ಸ್ವೀಕರಿಸಿದೆ. ಲೋಗೋ ರಾಷ್ಟ್ರೀಯ ಪುಷ್ಪವಾದ ಕಮಲದಿಂದ ಪ್ರೇರಿತವಾಗಿದೆ.

ಬೆಂಗಳೂರಿನ ಇಂಬಮ್ ಅವರು ವಿನ್ಯಾಸಗೊಳಿಸಿದ ಚಂಪಿ ಚಿಕ್ಕ ಆನೆಯ ಮ್ಯಾಸ್ಕಾಟ್‌ಗೆ 50,000 ರೂಪಾಯಿ ನಗದು ಬಹುಮಾನವನ್ನು ಸಚಿವರು ಘೋಷಿಸಿದ್ದಾರೆ.

26ನೇ ಯುವಜನೋತ್ಸವದ ಥೀಮ್ ವಿಕಾಸ್ ಯುವ-ವಿಕಾಸಿತ್ ಭಾರತ್ ಎಂಬುದಾಗಿದೆ.

ಯುವಜನೋತ್ಸವ ಕಾರ್ಯಕ್ರಮವನ್ನು ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಐದು ದಿನಗಳ ಕಾರ್ಯಕ್ರಮದಲ್ಲಿ ದೇಶದಾದ್ಯಂತ 7,5000 ಯುವಕರು ಭಾಗವಹಿಸಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top