News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜೋಶಿಮಠ ಭೂಮಿ ಕುಸಿತ: ಉನ್ನತ ಮಟ್ಟದ ಸಭೆ ಕರೆದ ಪ್ರಧಾನಮಂತ್ರಿ ಕಛೇರಿ

ನವದೆಹಲಿ: ಉತ್ತರಾಖಂಡದ ಜೋಶಿಮಠದ ನೂರಾರು ಕಟ್ಟಡಗಳು ಭೂಕುಸಿತದ ಕಾರಣ ಬಿರುಕು ಬಿಟ್ಟಿದ್ದು, ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಈ ಪ್ರದೇಶವನ್ನು ಈಗ ಖಾಲಿ ಮಾಡಲಾಗುತ್ತಿದೆ. ಈ ಪ್ರದೇಶಲ್ಲಿನ ನೂರಾರು ಜನರನ್ನು ಅವರ ಮನೆಗಳಿಂದ ಸ್ಥಳಾಂತರಿಸಲಾಗುತ್ತಿದೆ.

ಈ ನಡುವೆ ಪರಿಸ್ಥಿತಿಗಳ ಬಗ್ಗೆ ಚರ್ಚೆ ನಡೆಸಲು ಪ್ರಧಾನ ಮಂತ್ರಿ ಕಚೇರಿಯು ಉನ್ನತ ಮಟ್ಟದ ಸಭೆಯನ್ನು ಕರೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ ಅವರು ಸಂಪುಟ ಕಾರ್ಯದರ್ಶಿ, ಕೇಂದ್ರ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಉತ್ತರಾಖಂಡದ ಹಿರಿಯ ಅಧಿಕಾರಿಗಳಲ್ಲದೆ ಜೋಶಿಮಠದ ಜಿಲ್ಲಾ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು, ಅವರು ಸುಮಾರು 600 ಸಂತ್ರಸ್ತ ಕುಟುಂಬಗಳನ್ನು ತಕ್ಷಣವೇ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದರು, ಪಟ್ಟಣವನ್ನು ಉಳಿಸುವ ಎಲ್ಲಾ ಪ್ರಯತ್ನಗಳ ಬಗ್ಗೆ ಭರವಸೆ ನೀಡಿದರು.

ಜೋಶಿಮಠ ಮತ್ತು ಸುತ್ತಮುತ್ತ ಜಲವಿದ್ಯುತ್ ಯೋಜನೆಗಳು ಸೇರಿದಂತೆ ದೊಡ್ಡ ಪ್ರಮಾಣದ ನಿರ್ಮಾಣ ಕಾರ್ಯಗಳು ಭೂಮಿಯ ಕುಸಿತಕ್ಕೆ ಕಾರಣವಾಗಬಹುದು, ನೆಲದ ಮೇಲ್ಮೈ ಮುಳುಗುವಿಕೆ ಅಥವಾ ಜಗ್ಗುವಿಕೆಗೆ ಕಾರಣವಾಗಬಹುದು ಎಂದು ತಜ್ಞರು ವರ್ಷಗಳಿಂದ ಎಚ್ಚರಿಸಿದ್ದರು.

ಸುಮಾರು 17,000 ಜನರಿರುವ ಪಟ್ಟಣ ಜೋಶಿಮಠವು ಬದರಿನಾಥ್ ಮತ್ತು ಹೇಮಕುಂಡ್ ಸಾಹಿಬ್‌ನಂತಹ ಹಿಂದೂ ಮತ್ತು ಸಿಖ್ ಪುಣ್ಯಕ್ಷೇತ್ರಗಳಿಗೆ ತೀರ್ಥಯಾತ್ರೆಗಳಿಗೆ ಹೆಬ್ಬಾಗಿಲಾಗಿದೆ ಮತ್ತು ಹಿಮಾಲಯದ ಭಾಗಗಳಿಗೆ ಅಥವಾ ಔಲಿಯಲ್ಲಿ ಸ್ಕೀ ಮಾಡಲು ಬಯಸುವ ಪ್ರವಾಸಿಗರಿಗೆ ಪ್ರಿಯವಾದ ಪಟ್ಟಣವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top