News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉತ್ತರಾಖಂಡ ಸಿಎಂ ಜೊತೆ ಜೋಶಿಮಠ ಪರಿಸ್ಥಿತಿಯ ಬಗ್ಗೆ ಮೋದಿ ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಜೋಶಿಮಠ ಪಟ್ಟಣದ ಪರಿಸ್ಥಿತಿಯ ಕುರಿತು ದೂರವಾಣಿ ಸಂಭಾಷಣೆ ನಡೆಸಿದರು.

ಧಾಮಿ ಅವರು ಜೋಶಿಮಠದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿಗೆ ವಿವರಿಸಿದರು. ಹಲವಾರು ಮನೆಗಳು ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಪುನರ್ವಸತಿ ಯೋಜನೆಗಳು ಮತ್ತು ವ್ಯವಸ್ಥೆಗಳ ಬಗ್ಗೆ ಸಿಎಂ ಪ್ರಧಾನಿಗೆ ಮಾಹಿತಿ ನೀಡಿದರು.

ಜೋಶಿಮಠದ ಜನರಿಗೆ ನೆರವು ನೀಡಲು ರಾಜ್ಯಕ್ಕೆ ಸಾಧ್ಯವಿರುವ ಎಲ್ಲಾ ಆರ್ಥಿಕ ಮತ್ತು ತಾಂತ್ರಿಕ ಬೆಂಬಲವನ್ನು ನೀಡುವುದಾಗಿ ಮೋದಿಯವರು ಭರವಸೆ ನೀಡಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಧಾಮಿ ಅವರು, ಪ್ರಧಾನಿಯವರು ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮತ್ತು ಪ್ರದೇಶದಲ್ಲಿ ಸರ್ಕಾರವು ನಡೆಸುತ್ತಿರುವ ಸುರಕ್ಷತೆ ಮತ್ತು ಭದ್ರತಾ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ ಅವರು ಜೋಶಿಮಠದಲ್ಲಿ ಭೂಮಿ ಕುಸಿತದ ಪರಿಸ್ಥಿತಿಯನ್ನು ನಿರ್ಣಯಿಸಲು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಭೆಯ ನಂತರ ಮುಖ್ಯ ಕಾರ್ಯದರ್ಶಿ, ಡಿಜಿಪಿ ಅಶೋಕ್ ಕುಮಾರ್ ಅವರೊಂದಿಗೆ ಜೋಶಿಮಠಕ್ಕೆ ಆಗಮಿಸಿ ರಾಜ್ಯ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.

ದೇಶದಾದ್ಯಂತದ ತಜ್ಞ ವಿಜ್ಞಾನಿಗಳ ತಂಡವು ಭೂಮಿ ಕುಸಿತದ ಕಾರಣವನ್ನು ಕಂಡುಹಿಡಿಯುತ್ತಿದೆ ಮತ್ತು ಅಗತ್ಯವಿರುವ ಯಾವುದೇ ಕ್ರಮವನ್ನು ಕೈಗೊಳ್ಳುತ್ತದೆ. ನಾಗರಿಕರ ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದ್ದು, ಸ್ಥಳೀಯ ಆಡಳಿತವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

ಯಾವುದೇ ಸಂದರ್ಭದಲ್ಲೂ ಯಾವುದೇ ಅಪಾಯವನ್ನು ತೆಗೆದುಕೊಳ್ಳಬೇಡಿ ಎಂದು ಅವರು ಸ್ಥಳೀಯರಿಗೆ ಮನವಿ ಮಾಡಿದ್ದು, ಮನೋಹರ್ ಬಾಗ್, ಸಿಂಘರ್ ಮತ್ತು ಮಾರ್ವಾಡಿಯಂತಹ ಅಪಾಯಕಾರಿ ವಲಯಗಳನ್ನು ಒಳಗೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top