News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜೋಶಿಮಠ ವಿಪತ್ತು ಪೀಡಿತ ಪ್ರದೇಶವೆಂದು ಘೋಷಣೆ: ನಿರ್ಮಾಣ ಕಾರ್ಯ ನಿಷೇಧ

ನವದೆಹಲಿ: ಭೂಮಿಯ ಕುಸಿತವನ್ನು ಕಾಣುತ್ತಿರುವ ಉತ್ತರಾಖಂಡದ ಜೋಶಿಮಠವನ್ನು ವಿಪತ್ತು ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.

ಈ ಬಗ್ಗೆ ಚಮೋಲಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಿಮಾಂಶು ಖುರಾನಾ ಘೋಷಣೆ ಮಾಡಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವಾಲಯದ ಒಂದು ತಂಡ ಸೇರಿದಂತೆ ಎರಡು ಕೇಂದ್ರ ತಂಡಗಳು ಶೀಘ್ರದಲ್ಲೇ ಜೋಶಿಮಠಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲಿವೆ ಎಂದು ಅವರು ಹೇಳಿದ್ದಾರೆ.

ಚಮೋಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಜೋಶಿಮಠ ಪಟ್ಟಣದಲ್ಲಿ ಇದುವರೆಗೆ 603 ಕಟ್ಟಡಗಳು ಬಿರುಕು ಬಿಟ್ಟಿವೆ. ಒಟ್ಟು 68 ಕುಟುಂಬಗಳನ್ನು ‘ತಾತ್ಕಾಲಿಕವಾಗಿ’ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪರೀತ ಭೂಕುಸಿತಕ್ಕೆ ಒಳಗಾಗುವ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾದ ಪ್ರದೇಶಗಳಿಂದ ನಿವಾಸಿಗಳನ್ನು ತಕ್ಷಣವೇ ಸ್ಥಳಾಂತರಿಸಲು ಆಡಳಿತವು ಆದೇಶಿಸಿದೆ. ಜೋಶಿಮಠ ನಗರ ಪ್ರದೇಶದಲ್ಲಿ 229 ಕಟ್ಟಡಗಳನ್ನು ತಾತ್ಕಾಲಿಕವಾಗಿ ವಾಸಯೋಗ್ಯ ಎಂದು ಗುರುತಿಸಲಾಗಿದ್ದು, ಜನರನ್ನು ಹಿಡಿದಿಟ್ಟುಕೊಳ್ಳುವ ಇವುಗಳ ಸಾಮರ್ಥ್ಯ 1271 ಎಂದು ಅಂದಾಜಿಸಲಾಗಿದೆ. ಭೂಕುಸಿತದಿಂದ ಹಾನಿಗೊಳಗಾದ ಸ್ಥಳಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಮತ್ತು ದುರ್ಬಲ ಕುಟುಂಬಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top