ಚೆನ್ನೈ: 2023ರ ತಮಿಳುನಾಡು ವಿಧಾನಸಭೆ ಅಧಿವೇಶನದ ಮೊದಲ ದಿನವೇ ಗದ್ದಲದ ಗೂಡಾಗಿ ಪರಿವರ್ತನೆಗೊಂಡಿದೆ. ರಾಜ್ಯಪಾಲರು ಅರ್ಧದಲ್ಲೇ ಸದನದಿಂದ ಹೊರ ನಡೆದಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಅವರು ತಮ್ಮ ಸರ್ಕಾರ ಬರೆದ ಭಾಷಣದ ಅಂಶಗಳನ್ನು ರಾಜ್ಯಪಾಲರು ಭಾಷಣದಲ್ಲಿ ಸೇರಿಸದೆ ಶಿಷ್ಟಾಚಾರ ಉಲ್ಲಂಘಿಸಿ ಪ್ರಜಾಪ್ರಭುತ್ವ ವಿರೋಧಿಯಾಗಿದ್ದಾರೆ ಎಂದು ಆರೋಪಿಸಿದ ಬಳಿಕ ರಾಜ್ಯಪಾಲ ಆರ್ ಎನ್ ರವಿ ಸದನದಿಂದ ಹೊರ ನಡೆದಿದ್ದಾರೆ.
ಇದಕ್ಕೂ ಮುನ್ನ ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ವಿಸಿಕೆ ರಾಜ್ಯಪಾಲ ಆರ್ಎನ್ ರವಿ ವಿರುದ್ಧ ಘೋಷಣೆಗಳನ್ನು ಕೂಗಿ ಸದನದಿಂದ ಹೊರನಡೆದಿದ್ದವು.
ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಸರ್ಕಾರವು ಮುದ್ರಿಸಿದ ಮತ್ತು ಅಂಗೀಕರಿಸಿದ ರಾಜ್ಯಪಾಲರ ಭಾಷಣವನ್ನು ಮಾತ್ರ ಸೇರಿಸಬೇಕೆಂದು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಕೆಲವೇ ನಿಮಿಷಗಳ ಮೊದಲು ತಮಿಳುನಾಡು ರಾಜ್ಯಪಾಲರು ವಿಧಾನಸಭೆಯಿಂದ ಹೊರನಡೆದಿದ್ದಾರೆ.
ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಮಾತ್ರ ರೆಕಾರ್ಡ್ಗೆ ತೆಗೆದುಕೊಳ್ಳುವಂತೆ ಸ್ಪೀಕರ್ಗೆ ಒತ್ತಾಯಿಸುವ ನಿರ್ಣಯವನ್ನು ಸಿಎಂ ಸ್ಟಾಲಿನ್ ಮಂಡಿಸಿದ ನಂತರ ಘೋಷಣೆಗಳು ಪ್ರಾರಂಭವಾದವು ಮತ್ತು ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸೇರಿಸಿದ ಅಥವಾ ಸರ್ಕಾರ ಬರೆದುಕೊಟ್ಟ ಭಾಷಣದಿಂದ ಬಿಟ್ಟ ಭಾಗಗಳನ್ನು ರೆಕಾರ್ಡ್ಗೆ ಸೇರಿಸುವಂತೆ ನಿರ್ಣಯಿಸಲಾಗಿದೆ. ಜಾತ್ಯತೀತತೆಯ ಉಲ್ಲೇಖಗಳು, ತಮಿಳುನಾಡನ್ನು ಶಾಂತಿಯ ಸ್ವರ್ಗ ಎಂದು ಬಣ್ಣಿಸುವ ಮತ್ತು ಪೆರಿಯಾರ್, ಕರುಣಾನಿಧಿ,ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಅವರಂತಹ ನಾಯಕರ ಉಲ್ಲೇಖಗಳನ್ನು ಹೊಂದಿರುವ ರಾಜ್ಯ ಸರ್ಕಾರವು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ರಾಜ್ಯಪಾಲರು ಬಿಟ್ಟುಬಿಟ್ಟಿದ್ದಾರೆ ಎಂದು ಆಡಳಿತಾರೂಢ ಡಿಎಂಕೆ ಆರೋಪಿಸಿದೆ.
ತಮಿಳುನಾಡನ್ನು ʼದ್ರಾವಿಡಿಯನ್ ಮಾಡೆಲ್ʼ ಆಗಿ ಪ್ರತಿಬಿಂಬಿಸುವ ಎಂಕೆ ಸ್ಟಾಲಿನ್ ಅವರ ಪ್ರಯತ್ನಕ್ಕೆ ರಾಜ್ಯಪಾಲರು ತಡೆಯಾಗುತ್ತಿರುವ ಕಾರಣ ಅವರನ್ನು ಮೂಲೆಗುಂಪು ಮಾಡುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎನ್ನಲಾಗಿದೆ.
#WATCH | Chennai: Governor RN Ravi walks out of Tamil Nadu assembly after CM MK Stalin alleged Governor R N Ravi skipped certain parts of the speech & "has completely gone against the decorum of the assembly."
(Video Source: Tamil Nadu Assembly) pic.twitter.com/KGPmvRMQCu
— ANI (@ANI) January 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.