News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜೋಶಿಮಠದ ಅಸುರಕ್ಷಿತ ಕಟ್ಟಡಗಳನ್ನು ಕೆಡವಲಿದೆ ಉತ್ತರಾಖಂಡ ಸರ್ಕಾರ 

ನವದೆಹಲಿ: ಜೋಶಿಮಠದಲ್ಲಿರುವ ಅಸುರಕ್ಷಿತ ಕಟ್ಟಡಗಳನ್ನು ಕೆಡವಲು ಉತ್ತರಾಖಂಡ ಸರ್ಕಾರ ನಿರ್ಧರಿಸಿದೆ. ಭೂಮಿಯ ಕುಸಿತಕ್ಕೆ ಸಾಕ್ಷಿಯಾಗಿರುವ ಪಟ್ಟಣವನ್ನು  ಅಪಾಯ, ಬಫರ್ ಮತ್ತು ಸಂಪೂರ್ಣವಾಗಿ ಸುರಕ್ಷಿತ ವಲಯ ಎಂದು ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಸಂಭವನೀಯ ಅಪಾಯದ ಪ್ರಮಾಣವನ್ನು ಆಧರಿಸಿ ಈ ವಿಂಗಡನೆಗಳನ್ನು ಮಾಡಲಾಗಿದೆ. ಜೋಶಿಮಠ ಪ್ರದೇಶವನ್ನು ವಿಪತ್ತು ಪೀಡಿತ ಎಂದು ಘೋಷಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಚಮೋಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಜೋಶಿಮಠ ಪಟ್ಟಣದಲ್ಲಿ ಇದುವರೆಗೆ 603 ಕಟ್ಟಡಗಳು ಬಿರುಕು ಬಿಟ್ಟಿವೆ. ಅತಿ ಹೆಚ್ಚು ಹಾನಿಯಾಗಿರುವ ಕಟ್ಟಡಗಳನ್ನು ನೆಲಸಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಆರ್.ಮೀನಾಕ್ಷಿ ಸುಂದರಂ ತಿಳಿಸಿದ್ದಾರೆ. ಅಪಾಯ ಮತ್ತು ಬಫರ್ ವಲಯಗಳನ್ನು ನಿರ್ಣಯಿಸಲು ಆಡಳಿತವು ಸಮೀಕ್ಷೆಯನ್ನು ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮಾತನಾಡಿ, ಜೋಶಿಮಠದಲ್ಲಿ ಭೂ ಕುಸಿತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ. ಜೋಶಿಮಠದಲ್ಲಿನ ಪರಿಸ್ಥಿತಿಯನ್ನು ಪ್ರಧಾನಿ ಅವಲೋಕಿಸುತ್ತಿದ್ದಾರೆ ಮತ್ತು ನಿಯಮಿತವಾಗಿ ಅಪ್‌ಡೇಟ್ ತೆಗೆದುಕೊಳ್ಳುತ್ತಿದ್ದಾರೆ. ಜೋಶಿಮಠದ ಒಂಬತ್ತು ವಾರ್ಡ್‌ಗಳು ಅಥವಾ ಪುರಸಭೆ ಪ್ರದೇಶಗಳನ್ನು ‘ಮುಳುಗುವ ವಲಯ’ ಎಂದು ಘೋಷಿಸಿದ ನಂತರ, ಈ ಬಿಕ್ಕಟ್ಟಿನ ಸಮಯದಲ್ಲಿ ಸಾಮೂಹಿಕ ಪ್ರಯತ್ನಕ್ಕೆ ಕರೆ ನೀಡಿದ್ದೇನೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top