ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ದಾಳಿಯ ಕೆಲವು ದಿನಗಳ ನಂತರ ಗೃಹ ಸಚಿವ ಅಮಿತ್ ಶಾ ಸೋಮವಾರ ಕಣಿವೆ ರಾಜ್ಯದ ಭದ್ರತೆಯ ಬಗ್ಗೆ ನಿರ್ಣಾಯಕ ಸಭೆಯನ್ನು ನಡೆಸಿದ್ದಾರೆ. ಮೂಲಗಳ ಪ್ರಕಾರ ಸಭೆಯು ಸುಮಾರು 60 ನಿಮಿಷಗಳ ಕಾಲ ನಡೆದಿದ್ದು, ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಕುರಿತು ವಿವರವಾದ ಚರ್ಚೆ ನಡೆದಿದೆ.
ಮೂಲಗಳ ಪ್ರಕಾರ, ಸಭೆಯಲ್ಲಿ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ನಾಯಕರೊಂದಿಗೆ ರಾಜೌರಿಯಲ್ಲಿ 7 ಜನರ ಹತ್ಯೆಗೆ ಕಾರಣವಾದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಿದರು. ಕೇಂದ್ರ ಗೃಹ ಸಚಿವರು ಕಾಶ್ಮೀರಿ ಪಂಡಿತರು ಮತ್ತು ಮೀಸಲು ವರ್ಗದ ನೌಕರರ ಕುಂದುಕೊರತೆಗಳ ಬಗ್ಗೆಯೂ ಚರ್ಚಿಸಿದ್ದಾರೆ.
ರಜೌರಿ ದಾಳಿಯ ಹೊರತಾಗಿ, ಕಾಶ್ಮೀರಿ ಪಂಡಿತರು ಮತ್ತು ಮೀಸಲು ವರ್ಗದ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರು ಜಮ್ಮು ಮತ್ತು ಕಾಶ್ಮೀರ ರಾಜ್ಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಹೊಸ ವರ್ಷದ ದಿನದಂದು ರಾಜೌರಿಯ ಧಂಗ್ರಿ ಗ್ರಾಮದಲ್ಲಿ ನಡೆದ ಎರಡು ಭೀಕರ ದಾಳಿಗಳಲ್ಲಿ 7 ನಾಗರಿಕರು ಸಾವನ್ನಪ್ಪಿದ್ದರು. ಮೊದಲ ದಾಳಿಯಲ್ಲಿ ಭಾನುವಾರ ಅಪ್ಪರ್ ಧಂಗ್ರಿ ಗ್ರಾಮದಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರು ಮನೆಗಳ ಮೇಲೆ ನಡೆಸಿ 6 ಮಂದಿಯನ್ನು ಕೊಂದು ಹಾಕಿದ್ದರು. ಮರುದಿನ ಸೋಮವಾರ, IED ಸ್ಫೋಟವು ಗ್ರಾಮದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಕೊಂದಿತು. ಘಟನೆಯ ಬಳಿಕ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲು ಹೆಚ್ಚುವರಿ ಪಡೆಗಳನ್ನು ನಿಯೋಜಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ದಾಳಿಯ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚುವರಿಯಾಗಿ 18 ಕಂಪನಿಗಳನ್ನು ನಿಯೋಜಿಸಲು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
#BREAKING | Home Minister Amit Shah chairs key security meet post Rajouri terror attack. Tune in to watch here –https://t.co/HbKDYgaNDs pic.twitter.com/E4SMAewKYu
— Republic (@republic) January 10, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.