News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೇನೆ ಬಗ್ಗೆ ಸುಳ್ಳು ಆರೋಪ: ಶೆಹ್ಲಾ ರಶೀದ್‌ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷೆ ಮತ್ತು ಎಐಎಸ್‌ಎ ಸದಸ್ಯೆ ಶೆಹ್ಲಾ ರಶೀದ್ ಶೋರಾ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿದ್ದಾರೆ.

ಜನವರಿ 10 ರಂದು ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ಭಾರತೀಯ ಸೇನೆಯ ಬಗ್ಗೆ ಸುಳ್ಳು ಟ್ವೀಟ್‌ಗಳನ್ನು ಮಾಡಿದ್ದಕ್ಕಾಗಿ ಕಾನೂನು ಕ್ರಮಕ್ಕೆ ಅನುಮತಿ ನೀಡಲಾಗಿದೆ.‌ ಸೌಹಾರ್ದತೆ ಕಾಪಾಡುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ ಎಂದು ದೆಹಲಿ ಎಲ್‌ಜಿ ಮೂಲಗಳು ತಿಳಿಸಿವೆ.

ಅಡ್ವೊಕೇಟ್ ಅಲಾಖ್ ಅಲೋಕ್ ಶ್ರೀವಾಸ್ತವ ಅವರು ನೀಡಿದ ದೂರಿನ ಆಧಾರದ ಮೇಲೆ ಸೆಕ್ಷನ್ 153A IPC, PS-ಸ್ಪೆಷಲ್ ಸೆಲ್ ಅಡಿಯಲ್ಲಿ ಸೆಪ್ಟೆಂಬರ್ 3, 2019 ರ ಎಫ್‌ಐಆರ್‌ಗೆ ಈ ಕಾನೂನು ಕ್ರಮದ ನಿರ್ಧಾರ ಸಂಬಂಧಿಸಿದೆ.

ಆಗಸ್ಟ್ 2019 ರಲ್ಲಿ ಶೇಲಾ ರಶೀದ್ ಅವರು ಭಾರತೀಯ ಸೇನೆಯ ಮೇಲೆ ಸರಣಿ ಟ್ವೀಟ್‌ಗಳನ್ನು ಮಾಡಿ ಸೇನೆ ಚಿತ್ರಹಿಂಸೆ ನೀಡಿದೆ ಎಂದು ಆರೋಪಿಸಿದ್ದರು.

“ಶೋಪಿಯಾನ್‌ನಲ್ಲಿ  4 ಜನರನ್ನು ಸೇನಾ ಶಿಬಿರಕ್ಕೆ ಕರೆಸಲಾಯಿತು ಮತ್ತು ವಿಚಾರಣೆಗೆ ಒಳಪಡಿಸಿ ಚಿತ್ರಹಿಂಸೆ ನೀಡಲಾಯಿತು. ಅವರ ಕಿರುಚಾಟವನ್ನು ಇಡೀ ಪ್ರದೇಶವು ಕೇಳುವಂತೆ ಮತ್ತು ಜನ ಭಯಭೀತರಾಗುವಂತೆ ಅವರ ಹತ್ತಿರ ಮೈಕ್ ಅನ್ನು ಇರಿಸಲಾಗಿತ್ತು. ಇದು ಇಡೀ ಪ್ರದೇಶದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ”  ಎಂದು ಶೇಹ್ಲಾ ಅವರು ಟ್ವೀಟ್ ಮಾಡಿದ್ದರು.

ಆಧಾರ ರಹಿತವಾದ ಈ ಟ್ವಿಟ್‌ಗಾಗಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ನಿರ್ಧರಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top