News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನ

ಬೆಂಗಳೂರು: ಧರ್ಮದ ಕಟ್ಟುಪಾಡುಗಳಲ್ಲಿ ಮಹಿಳೆಯರನ್ನು ದಮನಿಸುವ ಮನಸ್ಥಿತಿಗಳನ್ನು ತಮ್ಮ ಬರವಣಿಗೆಗಳ ಮೂಲಕ ಕಟುವಾಗಿ ವಿರೋಧಿಸುತ್ತಿದ್ದ ಕನ್ನಡದ ಖ್ಯಾತ ಲೇಖಕಿ  ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.

ಸಾರಾ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮದಲ್ಲಿ ಜನಿಸಿದರು. ತಂದೆ ಪಿ.ಅಹಮದ್ ನ್ಯಾಯವಾದಿ. ತಾಯಿ ಚೈನಾಬಿ. ಸಾರಾ ಅವರು ಬರೆದ ಮೊದಲ ಚಂದ್ರಗಿರಿ ತೀರದಲ್ಲಿ ಕಾದಂಬರಿ ಭಾರೀ ಜನಪ್ರಿಯತೆ ಪಡೆದುಕೊಂಡಿತ್ತು. ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು. ತಮ್ಮ ಬರಹಗಳಲ್ಲಿ ಇಸ್ಲಾಂನ ಕೆಲವೊಂದು ಕಟ್ಟುಪಾಡುಗಳನ್ನು ಇವರು ಕಟುವಾಗಿ ವಿರೋಧಿಸುತ್ತಾ ಬಂದಿದ್ದರು.

ಸಹನಾ, ವಜ್ರಗಳು, ಕದನ ವಿರಾಮ, ಸುಳಿಯಲ್ಲಿ ಸಿಕ್ಕವರು, ತಳ ಒಡೆದ ದೋಣಿಯಲ್ಲಿ, ಪ್ರವಾಹ ಸುಳಿ, ಪಂಜರ, ಇಳಿಜಾರು, ಕಾಣಿಕೆ ಮೊದಲಾದ ಕಾದಂಬರಿಗಳನ್ನು ಅವರು ರಚಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನಾಡೋಜಗೌರವ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ. ಮಂಗಳೂರು ವಿಶ್ವವಿದ್ಯಾಲಯ ಅವರಿಗೆ 2018ರಲ್ಲಿ ಗೌರವ ಡಾಕ್ಟರೇಟ್ ನೀಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top