News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದಿನಿಂದ ದೇಶಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಇಂದಿನಿಂದ ದೇಶಾದ್ಯಂತ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸುತ್ತಿದೆ.

ಸ್ವಚ್ಛತಾ ಪಖ್ವಾಡದ ಅಡಿಯಲ್ಲಿ ಎಲ್ಲರಿಗೂ ಸುರಕ್ಷಿತ ರಸ್ತೆಗಳ ಪ್ರಯಾಣವನ್ನು ಉತ್ತೇಜಿಸುವುದು ಕಾರ್ಯಕ್ರಮದ ಗುರಿಯಾಗಿದೆ. ಒಂದು ವಾರದ ಅವಧಿಯಲ್ಲಿ ರಸ್ತೆ ಅಪಘಾತಗಳ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು ಜಾಗೃತಿ ಅಭಿಯಾನ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.

ರಾಷ್ಟ್ರ ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಬೀದಿ ನಾಟಕಗಳು ಮತ್ತು ಸಂವೇದನಾಶೀಲ ಅಭಿಯಾನಗಳನ್ನು ನಡೆಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

ನವದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಪೂಸಾದಲ್ಲಿ ಶಾಲಾ ವಿದ್ಯಾರ್ಥಿಗಳು, ಕಾರ್ಪೊರೇಟ್‌ಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರಿಗಾಗಿ ಪ್ರಬಂಧ ಬರವಣಿಗೆ ಮತ್ತು ಪೋಸ್ಟರ್ ತಯಾರಿಸುವ ಸ್ಪರ್ಧೆಯನ್ನು ಸಹ ಆಯೋಜಿಸಲಾಗುವುದು ಎಂದು ಅದು ಹೇಳಿದೆ.

ರಸ್ತೆ ಸುರಕ್ಷತೆ ಜಾಗೃತಿಗಾಗಿ ನಡೆಸಲಾಗುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಎಲ್ಲಾ ಸಂಸತ್ ಸದಸ್ಯರು, ರಾಜ್ಯ ಸರ್ಕಾರಗಳು ಮತ್ತು ಸಂಬಂಧಿತರನ್ನು ಸಚಿವಾಲಯ ಒತ್ತಾಯಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top