News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ಧಾರವಾಡಕ್ಕೆ ಮೋದಿ: ಯುವ ಜನೋತ್ಸವ ಉದ್ಘಾಟನೆ

ಹುಬ್ಬಳ್ಳಿ: ಧಾರವಾಡದಲ್ಲಿ ಜ.12ರಿಂದ 16ರ ವರೆಗೆ ರಾಷ್ಟ್ರೀಯ ಯುವ ಜನೋತ್ಸವ ಆಯೋಜನೆಗೊಂಡಿದ್ದು, ಇದನ್ನು ಉದ್ಘಾಟಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಧಾರವಾಡಕ್ಕೆ ಆಗಮಿಸಲಿದ್ದಾರೆ.

ಯುವ ಜನೋತ್ಸವದಲ್ಲಿ ಭಾಗಿಯಾಗಲು 28 ರಾಜ್ಯಗಳಿಂದ ಯುವಕರ ತಂಡ ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿನಿಧಿಗಳು ಬರುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಒಂದು ವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಪ್ರಥಮ ಬಾರಿಗೆ ರಾಷ್ಟ್ರೀಯ ಯುವಜನೋತ್ಸವ ಉತ್ತರ ಕರ್ನಾಟಕದಲ್ಲಿ ನಡೆಯುತ್ತಿದೆ, ಇದು ಈ ಭಾಗದ ಯುವಕರಿಗೆ ಪ್ರೇರಣೆ ಎಂದು ಮೋದಿ ಹೇಳಿದ್ದಾರೆ.

ಪ್ರತಿವರ್ಷ ಜನವರಿ.12 ಅನ್ನು ಸ್ವಾಮಿ ವಿವೇಕಾನಂದ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಇದಕ್ಕಾಗಿ ದೇಶದ ಯಾವುದಾದರು ಒಂದು ಭಾಗದಲ್ಲಿ ರಾಷ್ಟ್ರೀಯ ಯುವಜನೋತ್ಸವವನ್ನು ಆಯೋಜನೆ ಮಾಡಲಾಗುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top