News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜ. 21ರಿಂದ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕ ಉತ್ಸವ: ಲೋಗೋ ಬಿಡುಗಡೆ

ಬೆಂಗಳೂರು: ಜನವರಿ 21 ಮತ್ತು 22ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಉತ್ತರ ಕರ್ನಾಟಕ ಉತ್ಸವದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಡುಗಡೆ ಮಾಡಿದ್ದಾರೆ.

ಈ ಉತ್ಸವನ್ನು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ವತಿಯಿಂದ ಆಯೋಜಿಸಲಾಗುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಅಧ್ಯಕ್ಷ ಶಿವಕುಮಾರ ಮೇಟಿ ಅವರು,
“ಉತ್ತರ ಕರ್ನಾಟಕ ಭಾಗದವರು ವಿವಿಧ ಉದ್ಯೋಗಗಳನ್ನು ಅರಸಿ ಬಂದು ಬೆಂಗಳೂರು ಮಹಾನಗರದಲ್ಲಿ ನೆಲೆಸಿದ್ದಾರೆ. ನಾವು ನಮ್ಮವರಿಗಾಗಿ ಕೈ ಜೋಡಿಸುತ್ತಾ ಎಲ್ಲರೂ ಒಂದೆಡೆ ಸೇರಲು ಮತ್ತು ಬೆಳೆಯಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 21 ಮತ್ತು 22 ಶನಿವಾರ ಮತ್ತು ಭಾನುವಾರ ಎರಡು ದಿನ ನಡೆಯುತ್ತಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಾಮಾಜಿಕ ಕಾರ್ಯಕ್ರಗಳು ಹಾಗೂ ವಿವಿಧ ಚಟುವಟಿಕೆಗಳು ಆಯೋಜನೆಗೊಳ್ಳಲಿದೆ. ಉತ್ತರ ಕರ್ನಾಟಕದವರಿಗೆ ರಾಜ್ಯ ಸರ್ಕಾರ 3.24 ಗುಂಟೆ ಜಮೀನು ಮಂಜೂರು ಮಾಡಿದೆ. ಹೀಗಾಗಿ ಬೊಮ್ಮಾಯಿ ಹಾಗೂ ಅವರ ಸಚಿವ ಸಂಪುಟದ ಸದಸ್ಯರಿಗೆ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top