News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉತ್ತರಾಖಂಡ ಸರ್ಕಾರದಿಂದ ಜೋಶಿಮಠ ಪುನರ್ವಸತಿಗಾಗಿ 45 ಕೋಟಿ ರೂ ಅನುದಾನ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ ಜೋಶಿಮಠದ ಪರಿಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ.

ಉತ್ತರಾಖಂಡದ ಮುಖ್ಯಮಂತ್ರಿಗಳ ಕಚೇರಿಯ ಪ್ರಕಾರ, ಜೋಶಿಮಠದಲ್ಲಿ ಭೂ ಕುಸಿತದ ವಿಷಯದ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಕಾರ್ಯಗಳನ್ನು ಮಾಡುವ ಭರವಸೆಯನ್ನು ಶಾ ನೀಡಿದ್ದಾರೆ.

ಜೋಶಿಮಠ ಪ್ರದೇಶದಲ್ಲಿ ಭೂ ಕುಸಿತದಿಂದಾಗಿ ಸುಮಾರು 723 ಕಟ್ಟಡಗಳು ಬಿರುಕುಗಳನ್ನು ಹೊಂದಿವೆ. ಇದುವರೆಗೆ ಅಧಿಕಾರಿಗಳು 86 ಕಟ್ಟಡಗಳನ್ನು ಅಸುರಕ್ಷಿತ ವಲಯ ಎಂದು ಘೋಷಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 499 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲಾಗಿದೆ.

ಉತ್ತರಾಖಂಡ ಸಿಎಂ ಬುಧವಾರ ಜೋಶಿಮಠಕ್ಕೆ ಭೇಟಿ ನೀಡಿ ಬಿರುಕುಗಳಿಂದ ಉಂಟಾದ ಹಾನಿಯ ಪ್ರಮಾಣವನ್ನು ಪರಿಶೀಲಿಸಿದ್ದಾರೆ. ಸ್ಥಳೀಯರೊಂದಿಗೆ ಸಂವಾದ ನಡೆಸಿದ್ದಾರೆ ಮತ್ತು ಪರಿಹಾರ ಶಿಬಿರಗಳಿಗೆ ಭೇಟಿ ನೀಡಿ ಅಲ್ಲಿ ಅವರು ತಂಗಿರುವ ಜನರನ್ನು ಭೇಟಿ ಮಾಡಿದ್ದಾರೆ.

ಭೂ ಕುಸಿತದಿಂದ ಸಂತ್ರಸ್ತರಾದ ಜನರಿಗೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರ 1.5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಿದೆ ಎಂದು ಧಾಮಿ ಘೋಷಿಸಿದ್ದಾರೆ.

“ದೀರ್ಘಾವಧಿಯಲ್ಲಿ, ಜೋಶಿಮಠದಲ್ಲಿ ಉಂಟಾದ ಹಾನಿಯ ವ್ಯಾಪ್ತಿಯ ಸಂಪೂರ್ಣ ಮೌಲ್ಯಮಾಪನದ ನಂತರ ನಾವು ಹೊಂದಿರುವ ನಿಬಂಧನೆಗಳ ಆಧಾರದ ಮೇಲೆ ಜನರಿಗೆ ಪರಿಹಾರವನ್ನು ನೀಡಲು ನಾವು ಪ್ರಯತ್ನಿಸುತ್ತೇವೆ” ಎಂದು ಧಾಮಿ ಹೇಳಿದ್ದಾರೆ.

ಮುಖ್ಯಮಂತ್ರಿಯವರ ಘೋಷಣೆಯ ನಂತರ, ರಾಜ್ಯ ಸರ್ಕಾರವು ವಿಶೇಷ ಪುನರ್ವಸತಿ ಪ್ಯಾಕೇಜ್ ಮತ್ತು ಜೋಶಿಮಠದಲ್ಲಿ ಭೂಮಿ ಕುಸಿತದಿಂದ ಸಂತ್ರಸ್ತ ಕಟ್ಟಡ ಮಾಲೀಕರು/ಕುಟುಂಬಗಳ ಸ್ಥಳಾಂತರಕ್ಕಾಗಿ 45 ಕೋಟಿ ರೂ. ಅನುದಾನ ನೀಡಲಾಗುತ್ತದೆ ಎಂದಿದ್ದಾರೆ.

ಇದಲ್ಲದೆ, ಜೋಶಿಮಠದ ಸಂತ್ರಸ್ತ ಜನರಿಗೆ ತಕ್ಷಣದ ಮಧ್ಯಂತರ ಸಹಾಯವನ್ನು ಪಾರದರ್ಶಕವಾಗಿ ವಿತರಿಸಲು ಮತ್ತು ಪುನರ್ವಸತಿ ಪ್ಯಾಕೇಜ್ ದರವನ್ನು ನಿರ್ಧರಿಸಲು ರಾಜ್ಯ ಸರ್ಕಾರವು 11 ಸದಸ್ಯರ ಸಮಿತಿಯನ್ನು ರಚಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top