News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಾರಣಾಸಿಯಲ್ಲಿ ನಿರ್ಮಾಣವಾಗಿರುವ ಟೆಂಟ್‌ ನಗರ ಉದ್ಘಾಟಿಸಿದ ಮೋದಿ

ನವದೆಹಲಿ: ವಾರಣಾಸಿಯಲ್ಲಿ ಗಂಗಾ ನದಿಯ ತಟದಲ್ಲಿ ನಿರ್ಮಾಣ ಮಾಡಲಾಗಿರುವ ಟೆಂಟ್ ನಗರವನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲ ಮಾರ್ಗಗಳ ಖಾತೆ ಸಚಿವ ಸರ್ಭಾನಂದ ಸೋನಾವಾಲ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಉಪಸ್ಥಿತರಿದ್ದರು.

ವಾರಣಾಸಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮಹತ್ವಾಕಾಂಕ್ಷೆಯೊಂದಿಗೆ ಗಂಗಾ ನದಿಯ ತಟದಲ್ಲಿ ಟೆಂಟ್ ನಗರವನ್ನು ಸ್ಥಾಪನೆ ಮಾಡಲಾಗಿದೆ. ಘಾಟ್‌ಗಳ ಎದುರುಗಡೆ ಈ ನಗರವನ್ನು ನಿರ್ಮಾಣ ಮಾಡಲಾಗಿದ್ದು, ವಾರಣಾಸಿಗೆ ಆಗಮಿಸುವ ಅತಿಹೆಚ್ಚಿನ ಸಂಖ್ಯೆಯ ಪ್ರವಾಸಿಗರಿಗೆ ವಸತಿ ಸೌಲಭ್ಯಗಳನ್ನು ಮತ್ತು ಊಟದ ವ್ಯವಸ್ಥೆಯನ್ನು ಇದು ಹೊಂದಿರಲಿದೆ.

ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ ಇದನ್ನು ಅಭಿವೃದ್ಧಿಪಡಿಸಿದ್ದು, ವಿವಿಧ ಘಾಟ್‌ಗಳಿಂದ ಪ್ರವಾಸಿಗರು ಇಲ್ಲಿಗೆ ದೋಣಿಯ ಮೂಲಕ ಆಗಮಿಸಬಹುದಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಿಂದ ಜೂನ್ ವರೆಗೆ ಈ ನಗರ ಕಾರ್ಯಾಚರಿಸಲಿದೆ. ಮಳೆ ಬೀಳುವ ಸಂದರ್ಭದಲ್ಲಿ ನದಿಯ ನೀರಿನ ಮಟ್ಟ ಹೆಚ್ಚಾಗುವ ಹಿನ್ನಲೆಯಲ್ಲಿ ಮೂರು ತಿಂಗಳ ಅವಧಿಗೆ ಈ ನಗರ ಸ್ಥಗಿತವಾಗಿರಲಿದೆ.

ಈ ನಗರದಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಪೂರ್ವ ಉತ್ತರ ಪ್ರದೇಶದ ಉತ್ಪನ್ನಗಳನ್ನು ಮತ್ತು ಸಂಸ್ಕೃತಿಯನ್ನು ಇಲ್ಲಿ ಕಾಣಬಹುದಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top