News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದ್ವೇಷದ ಭಾಷಣಗಳು ಅಪಾಯಕಾರಿ: ಸುಪ್ರೀಂಕೋರ್ಟ್

ನವದೆಹಲಿ: ದ್ವೇಷದ ಭಾಷಣಗಳು ಸಂಪೂರ್ಣ ಅಪಾಯಕಾರಿ ಎಂದು ಕರೆದಿರುವ ಸುಪ್ರೀಂಕೋರ್ಟ್, ಭಾರತಕ್ಕೆ ಮುಕ್ತ ಮತ್ತು ಸಮತೋಲಿತ ಮಾಧ್ಯಮದ ಅವಶ್ಯಕತೆ ಇದೆ ಎಂದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಎಲ್ಲವೂ ಟಿಆರ್‌ಪಿ (ಟೆಲಿವಿಷನ್ ರೇಟಿಂಗ್ ಪಾಯಿಂಟ್) ನಿಂದ ನಡೆಸಲ್ಪಡುತ್ತಿದೆ ಮತ್ತು ಚಾನಲ್‌ಗಳು ಪರಸ್ಪರ ಪೈಪೋಟಿ ನಡೆಸುತ್ತಿದ್ದು, ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸುತ್ತಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಟಿವಿ ನ್ಯೂಸ್ ಆಂಕರ್‌ಗಳು ದ್ವೇಷದ ಭಾಷಣವನ್ನು ಪ್ರಚಾರ ಮಾಡುವ ಭಾಗವಾದ ಸಂದರ್ಭದಲ್ಲಿ  ಪ್ರಸಾರವನ್ನು ಯಾಕೆ ತಡೆಹಿಡಿಯಬಾರದು ಎಂದು ಸುಪ್ರೀಂ ಪ್ರಶ್ನಿಸಿದೆ.

ಪತ್ರಿಕೆಗಳಿಗೆ ಇರುವಂತೆ ಸುದ್ದಿ ವಾಹಿನಿಗಳಿಗೆ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇಲ್ಲ ಎಂಬುದನ್ನು ಗಮನಿಸಿದ ಸುಪ್ರೀಂ, ನಮಗೆ ವಾಕ್ ಸ್ವಾತಂತ್ರ್ಯ ಬೇಕು, ಆದರೆ ಯಾವ ವೆಚ್ಚದಲ್ಲಿ ಎಂದು ಪ್ರಶ್ನಿಸಿದೆ.

ದೇಶಾದ್ಯಂತ ನಡೆಯುತ್ತಿರುವ ದ್ವೇಷ ಭಾಷಣದ ಘಟನೆಗಳಿಗೆ ಕಡಿವಾಣ ಹಾಕಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ, ‘ದ್ವೇಷ ಭಾಷಣ ಸಂಪೂರ್ಣ ಮಾರಕವಾಗಿ ಪರಿಣಮಿಸಿದೆ. ಇದನ್ನು ನಿಲ್ಲಿಸಬೇಕು ಎಂದಿದೆ.

“ನಾವು ಭಾರತದಲ್ಲಿ ಮುಕ್ತ ಮತ್ತು ಸಮತೋಲಿತ ಪತ್ರಿಕಾವನ್ನು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top