News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಶಸ್ತ್ರ ಪಡೆಗಳ ಹಿರಿಯ ಯೋಧರ ದಿನಾಚರಣೆ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವಾರ್ಪಣೆ

ನವದೆಹಲಿ: ದೇಶವು ಇಂದು 7 ನೇ ಸಶಸ್ತ್ರ ಪಡೆಗಳ ಹಿರಿಯ ಯೋಧರ ದಿನವನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ನಮನ ಸಲ್ಲಿಸಲಾಗುತ್ತಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್, ಭೂಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ, ವಾಯುಸೇನಾ ಮುಖ್ಯಸ್ಥ ವಿಆರ್‌ ಚೌಧರಿ, ನೌಕಾಸೇನಾ ಮುಖ್ಯಸ್ಥ ಅಡ್ಮಿರಲ್‌ ಆರ್‌ ಹರಿಸಿಂಗ್‌ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದ್ದರು.

ಜುಹುಂಜುನು, ಜಲಂಧರ್, ಪನಾಗಢ್, ನವದೆಹಲಿ, ಡೆಹ್ರಾಡೂನ್, ಚೆನ್ನೈ, ಚಂಡೀಗಢ, ಭುವನೇಶ್ವರ್ ಮತ್ತು ಮುಂಬೈ ಸೇರಿದಂತೆ ದೇಶದ ಒಂಬತ್ತು ಸ್ಥಳಗಳಲ್ಲಿ ಸಶಸ್ತ್ರ ಪಡೆಗಳ ಹಿರಿಯ ಯೋಧರ ದಿನದ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ.

ಸಶಸ್ತ್ರ ಪಡೆಗಳ ಹಿರಿಯ ಯೋಧರ ದಿನವನ್ನು ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುತ್ತದೆ. 1953 ರ ಈ ದಿನದಂದು ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಫೀಲ್ಡ್ ಮಾರ್ಷಲ್ ಕೆಎಂ ಕಾರಿಯಪ್ಪ ಅವರು ಔಪಚಾರಿಕವಾಗಿ ಸೇವೆಯಿಂದ ನಿವೃತ್ತರಾದರು. 1947 ರಲ್ಲಿ ಪಾಕಿಸ್ತಾನದ ವಿರುದ್ಧ  ಭಾರತೀಯ ಪಡೆಗಳನ್ನು ವಿಜಯದತ್ತ ಮುನ್ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಮೊದಲ ‌ಬಾರಿಗೆ ಸಶಸ್ತ್ರ ಪಡೆಗಳ ಹಿರಿಯ ಯೋಧರ ದಿನವನ್ನು ಜನವರಿ 14, 2016 ರಂದು ಆಚರಿಸಲಾಯಿತು, ಪ್ರತಿ ವರ್ಷ ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳ ಗೌರವಾರ್ಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಈ ದಿನವನ್ನು ಸ್ಮರಿಸಲಾಗುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top