News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜಸ್ಥಾನ ಶಿಕ್ಷಕ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿ ಮನೆ ನೆಲಸಮ

ನವದೆಹಲಿ: ರಾಜಸ್ಥಾನ ಲೋಕಸೇವಾ ಆಯೋಗದ (ಆರ್‌ಪಿಎಸ್‌ಸಿ) ಶಿಕ್ಷಕರ ನೇಮಕಾತಿ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಭೂಪೇಂದ್ರ ಸರನ್‌ ಎಂಬಾತನ ಅಕ್ರಮವಾಗಿ ನಿರ್ಮಿಸಿದ ಮನೆಯನ್ನು ಜೈಪುರ ಅಭಿವೃದ್ಧಿ ಪ್ರಾಧಿಕಾರ  ಶನಿವಾರ ನೆಲಸಮ ಮಾಡಿದೆ. ಸಂಜೆ 4 ಗಂಟೆ ಸುಮಾರಿಗೆ ಜೆಡಿಎ ಸರನ್  ಮನೆಯನ್ನು ಅಕ್ರಮವಾಗಿ ನಿರ್ಮಿಸಿದ ಭಾಗವನ್ನು ಕೆಡವಲು ಪ್ರಾರಂಭಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಪ್ರಾಧಿಕಾರದ ಮುಖ್ಯ ಜಾರಿ ಅಧಿಕಾರಿ, ಮನೆಯನ್ನು ಕೆಡವುವಾಗ ಪ್ರಾಧಿಕಾರವು ಹೆಚ್ಚಿನ ಕಾಳಜಿ ವಹಿಸುತ್ತಿದೆ. ಪಕ್ಕದ ಆಸ್ತಿಗಳಿಗೆ ಅಥವಾ ಕೆಡವಲಾಗುತ್ತಿರುವ ಮನೆಯ ಕಾನೂನಾತ್ಮಕವಾಗಿರುವ ಭಾಗಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂಬುದನ್ನು ಖಚಿತಪಡಿಸಲಾಗುತ್ತಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಜೆಡಿಎ ನ್ಯಾಯಮಂಡಳಿ ನ್ಯಾಯಾಲಯದಲ್ಲಿ ಈ ವಿಷಯದ ವಿಚಾರಣೆ ಪೂರ್ಣಗೊಂಡಿದ್ದು, ಮನೆಯ ಅಕ್ರಮ ಭಾಗವನ್ನು ಕೆಡವಲು ಮತ್ತು ಅನುಮೋದಿತ ಭಾಗವನ್ನು ಸುರಕ್ಷಿತವಾಗಿಡಲು ಸೂಚಿಸಲಾಗಿದೆ. ಸರನ್ ಅವರ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಪೀಠ ಆದೇಶ ನೀಡಿದೆ. ಸರನ್  ವಕೀಲರು  ಅಕ್ರಮ ಕಟ್ಟಡ ನಿರ್ಮಿಸಿರುವುದನ್ನು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top