News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಂದೂ ಅಥವಾ ಕೇಸರಿ ಭಯೋತ್ಪಾದನೆ ಅಸ್ತಿತ್ವದಲ್ಲಿಲ್ಲ: RTI

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ವಿವರಗಳನ್ನು ಮಾಹಿತಿ ಹಕ್ಕು (ಆರ್‌ಟಿಐ) ಬಹಿರಂಗಪಡಿಸಿದ್ದು, ಇದರಲ್ಲಿ ಹಿಂದೂ ಭಯೋತ್ಪಾದನೆ ಎಂಬುದು ಅಸ್ತಿತ್ವದಲ್ಲಿ ಇಲ್ಲ ಎಂಬುದು ಸ್ಪಷ್ಟಗೊಂಡಿದೆ.

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ವಿವರ ಮತ್ತು ‘ಹಿಂದೂ ಅಥವಾ ಕೇಸರಿ ಭಯೋತ್ಪಾದನೆ (ಯಾವುದಾದರೂ ಇದ್ದರೆ)’ ಮಾಹಿತಿ ನೀಡುವಂತೆ ಆರ್‌ಟಿಐ ಕಾರ್ಯಕರ್ತ ರೊಬ್ಬರು ವಿವರ ಕೇಳಿದ್ದರು.

ಆರ್‌ಟಿಐ ಕಾರ್ಯಕರ್ತ ಪ್ರಫುಲ್ ಸರ್ದಾ ಭಾರತದಲ್ಲಿ ಎಷ್ಟು ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿವೆ ಎಂಬ ಮಾಹಿತಿಯನ್ನು ಕೇಳಿದ್ದಾರೆ. ಈ ಸಂಘಟನೆಗಳ ಹೆಸರು ಮತ್ತು ವಿವರಗಳನ್ನು ಕೇಳಿದ್ದಾರೆ. ಭಾರತದಲ್ಲಿ ಸಕ್ರಿಯ ಭಯೋತ್ಪಾದಕ ಸಂಘಟನೆಗಳನ್ನು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಗಳನ್ನು ಕೂಡ ಕೇಳಿದ್ದಾರೆ.

ಗೃಹ ಸಚಿವಾಲಯದ ದಾಖಲೆಗಳ ಪ್ರಕಾರ 2006 ರ ಮಾಲೆಗಾಂವ್ ಬಾಂಬ್ ಸ್ಫೋಟ ಅಥವಾ ಯಾವುದೇ ಬಾಂಬ್ ಸ್ಫೋಟದಲ್ಲಿ ‘ಹಿಂದೂ ಅಥವಾ ಕೇಸರಿ’ ಭಯೋತ್ಪಾದಕರು ಭಾಗಿಯಾಗಿದ್ದರೆ ವಿವರ ನೀಡುವಂತೆ ಸರ್ದಾ ಅವರು ಮಾಹಿತಿ ಕೇಳಿದ್ದಾರೆ. ಆರ್‌ಟಿಐ ಕಾರ್ಯಕರ್ತ ‘ಇಸ್ಲಾಮಿಕ್ ಭಯೋತ್ಪಾದನೆ’ ಎಂಬ ಪದದ ಬಗ್ಗೆ ಮತ್ತು ಅಂತಹ ಸಂಘಟನೆಗಳು ಭಾರತದಲ್ಲಿ ಯಾವುದೇ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿರುವ ಬಗ್ಗೆಯೂ ವಿವರ ಕೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯವು ಹಂಚಿಕೊಂಡ ಮಾಹಿತಿ ಪ್ರಕಾರ, ಭಾರತದಲ್ಲಿ ಹಿಂದೂ ಅಥವಾ ಕೇಸರಿ ಭಯೋತ್ಪಾದನೆಯ ಯಾವುದೇ ಸಂಪರ್ಕ ಅಥವಾ ಪದ ಅಸ್ತಿತ್ವದಲ್ಲಿ ಇಲ್ಲ ಎಂಬುದು ಸ್ಪಷ್ಟವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top