News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತದೊಂದಿಗಿನ ಯುದ್ಧ ಪಾಕಿಸ್ಥಾನಕ್ಕೆ ಬಡತನ, ದುಃಖ ನೀಡಿದೆ: ಪಾಕ್‌ ಪ್ರಧಾನಿ

ಶ್ರೀನಗರ: ಕಾಶ್ಮೀರ ಸಮಸ್ಯೆಯನ್ನು ಭಾರತ ಮತ್ತು ಪಾಕಿಸ್ಥಾನಗಳು ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಒತ್ತಾಯಿಸಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪಾಕಿಸ್ಥಾನ ಭಾರತದೊಂದಿಗೆ ಹೋರಾಡಿದ ಮೂರು ಯುದ್ಧಗಳು ಜನರಿಗೆ ದುಃಖ, ಬಡತನ ಮತ್ತು ನಿರುದ್ಯೋಗವನ್ನು ತಂದಿವೆ ಎಂದಿದ್ದಾರೆ. ಅಲ್ಲದೇ ಸಮಸ್ಯೆಯನ್ನು ಪರಿಹರಿಸಲು ಗಂಭೀರ ಮತ್ತು ಪ್ರಾಮಾಣಿಕ ಮಾತುಕತೆ ನಡೆಸಬೇಕು ಎಂದು ಕರೆ ನೀಡಿದ್ದಾರೆ.

ಬಾಂಬ್‌ಗಳು ಮತ್ತು ಮದ್ದುಗುಂಡುಗಳಂತಹ ಮಿಲಿಟರಿ ಉಪಕರಣಗಳಿಗೆ ಸಂಪನ್ಮೂಲಗಳನ್ನು ವ್ಯರ್ಥ ಮಾಡುವುದಕ್ಕಿಂತ ಬಡತನವನ್ನು ನಿವಾರಿಸಲು, ಸಮೃದ್ಧಿಯನ್ನು ಸಾಧಿಸಲು ಮತ್ತು ಜನರಿಗೆ ಶಿಕ್ಷಣ, ಆರೋಗ್ಯ ಸೌಲಭ್ಯಗಳು ಮತ್ತು ಉದ್ಯೋಗವನ್ನು ಒದಗಿಸುವ ಅಗತ್ಯವನ್ನು ಅವರು ವಿವರಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನವು ನೆರೆಹೊರೆಯವರಾಗಿದ್ದು, ಸಂಘರ್ಷಗಳಿಗೆ ಸಂಪನ್ಮೂಲಗಳನ್ನು ವ್ಯರ್ಥ ಮಾಡದೆ ಶಾಂತಿಯುತವಾಗಿ ಬದುಕಲು ಮತ್ತು ಒಟ್ಟಿಗೆ ಪ್ರಗತಿ ಸಾಧಿಸಲು ಶ್ರಮಿಸಬೇಕಾಗಿರುವುದು ಇಂದಿನ ಅಗತ್ಯ ಎಂದಿದ್ದಾರೆ

ಪರಮಾಣು ಯುದ್ಧದ ನಂತರದ ದುರಂತ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ ಷರೀಫ್, ಎರಡೂ ದೇಶಗಳು ಪರಮಾಣು ಶಸ್ತ್ರಾಸ್ತ್ರಗಳಿಂದ ಶಸ್ತ್ರಸಜ್ಜಿತವಾದಾಗ ಮತ್ತು ಯುದ್ಧ ಪ್ರಾರಂಭವಾದಾಗ, ಏನಾಯಿತು ಎಂಬುದರ ಬಗ್ಗೆ ಕಥೆಯನ್ನು ಹೇಳಲು ಯಾರೂ ಇರುವುದಿಲ್ಲ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ಥಾನಕ್ಕೆ ಭಾರತದೊಂದಿಗಿನ ಯುದ್ಧ ತನ್ನನ್ನು ಎಷ್ಟರ ಮಟ್ಟಿಗೆ ಬಾಧಿಸಿದೆ ಎಂಬುದರ ಅರಿವು ಈಗ ಆಗಿದೆ ಎಂಬುದು ಅಲ್ಲಿನ ಪ್ರಧಾನಿಯ ಮಾತುಗಳಿಂದ ತಿಳಿದು ಬರುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top