ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ ನಿರಂತವಾಗಿ ನಡೆಯುತ್ತಿದೆ. ಬುದ್ಗಾಂನಲ್ಲಿ ಎನ್ಕೌಂಟರ್ ನಡೆದಿದ್ದು, ಇದರಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
“ಬುದ್ಗಾಮ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹತರಾದ ಇಬ್ಬರು ಭಯೋತ್ಪಾದಕರನ್ನು ಗುರುತಿಸಲಾಗಿದೆ ಮತ್ತು ಇವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರೊಂದಿಗೆ ಶಾಮೀಲಾಗಿದ್ದರು” ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಇಂದು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ನಂತರ ಸೈನಿಕರು ಬುದ್ಗಾಮ್ನಲ್ಲಿ ಮೊಬೈಲ್ ವಾಹನ ತಪಾಸಣಾ ಕೇಂದ್ರವನ್ನು ಸ್ಥಾಪಿಸಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ತಪಾಸಣೆಗಾಗಿ ಕ್ಯಾಬ್ ಅನ್ನು ನಿಲ್ಲಿಸಲು ಸೂಚಿಸಿದ ಸಂದರ್ಭದಲ್ಲಿ ಅದರ ಒಳಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು, ಈ ವೇಳೆ ಪ್ರತಿದಾಳಿ ನಡೆಸಲಾಯಿತು” ಎಂದು ಅಧಿಕಾರಿ ಹೇಳಿದ್ದಾರೆ.
ಇಬ್ಬರೂ ಹತ್ಯೆಗೀಡಾದ ಭಯೋತ್ಪಾದಕರನ್ನು ಪುಲ್ವಾಮಾದ ಅರ್ಬಾಜ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದೆ, ಇವರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಸಂಪರ್ಕ ಹೊಂದಿದ್ದರು. ಈ ಹಿಂದೆ ಭಯೋತ್ಪಾದಕರು ಎನ್ಕೌಂಟರ್ನಿಂದ ತಪ್ಪಿಸಿಕೊಂಡಿದ್ದರು ಎಂದು ಮಾಹಿತಿ ನೀಡಿದ್ದಾರೆ.
#BudgamEncounterUpdate: Both the killed terrorists are identified as Arbaaz Mir and Shahid Sheikh of Pulwama linked with the proscribed terror outfit LeT. Both the terrorists earlier escaped from recent encounter: ADGP Kashmir@JmuKmrPolice https://t.co/e7b70sJEbI
— Kashmir Zone Police (@KashmirPolice) January 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.