ನವದೆಹಲಿ: ಭಾರತದಲ್ಲಿರುವ ಶ್ರೀಲಂಕಾದ ಹೈಕಮಿಷನರ್ ಮಿಲಿಂದಾ ಮೊರಗೋಡ ಅವರು ಇಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಭಾರತ-ಶ್ರೀಲಂಕಾ ಸಂಬಂಧಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು.
ಈ ಬಗ್ಗೆ ಭಾರತದಲ್ಲಿನ ಶ್ರೀಲಂಕಾ ಹೈಕಮಿಷನ್ ಟ್ವೀಟ್ ಮಾಡಿದ್ದು, “ಹೈ ಕಮಿಷನರ್ ಮಿಲಿಂದಾ ಮೊರಗೋಡ ಅವರು ಇಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಕುಮಾರ್ ದೋವಲ್ ಅವರನ್ನು ಭೇಟಿಯಾಗಿ ಭಾರತ-ಶ್ರೀಲಂಕಾ ಸಂಬಂಧಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ” ಎಂದಿದೆ.
ಈ ನಡುವೆ, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಈ ವಾರ ಶ್ರೀಲಂಕಾಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಅವರ ಭೇಟಿಯ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾಗೆ ಈಗಾಗಲೇ ಭಾರತ ಸಾಕಷ್ಟು ನೆರವನ್ನು ನೀಡಿದ್ದು, ಇನ್ನಷ್ಟು ನೆರವು ನೀಡುವ ಭರವಸೆ ಇದೆ. ಈ ಬಗ್ಗೆ ಶ್ರೀಲಂಕಾ ಮಾತುಕತೆ ನಡೆಸುತ್ತಿದೆ.
High Commissioner @MilindaMoragoda met with the National Security Advisor of India Shri Ajit Kumar Doval today (16), and discussed matters pertaining to India-Sri Lanka relations. #lka pic.twitter.com/PgXDXJsqLo
— Sri Lanka in India (@SLinIndia) January 16, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.