ನವದೆಹಲಿ: ಈ ದೇಶದ ಯುವಜನರಲ್ಲಿ ಶಿಸ್ತು ಮತ್ತು ನಾಯಕತ್ವವನ್ನು ಬೆಳೆಸುವಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಕೊಡುಗೆ ಅನುಕರಣೀಯವಾಗಿದೆ ಎಂದು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹೇಳಿದ್ದಾರೆ.
ಜನರಲ್ ಚೌಹಾಣ್ ಅವರು ಇಂದು ನವದೆಹಲಿಯ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಎನ್ಸಿಸಿ ಗಣರಾಜ್ಯೋತ್ಸವ ಶಿಬಿರಕ್ಕೆ ಭೇಟಿ ನೀಡಿದರು ಮತ್ತು ಎನ್ಸಿಸಿ ಕೆಡೆಟ್ಗಳ ಜೊತೆ ಸಂವಾದ ನಡೆಸಿದರು.
ರಾಷ್ಟ್ರ ನಿರ್ಮಾಣ ಮತ್ತು ಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಎನ್ಸಿಸಿ ಕೆಡೆಟ್ಗಳ ಕೊಡುಗೆಯನ್ನು ಎತ್ತಿ ತೋರಿಸಿದ ಅವರು, ಪುನೀತ ಸಾಗರ ಅಭಿಯಾನವನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಸ್ಟಿಕ್ ತ್ಯಾಜ್ಯಗಳನ್ನು ತೆಗೆದು ಮರುಬಳಕೆ ಮಾಡುವ ಮೂಲಕ ದೇಶದ ಕಡಲತೀರಗಳು ಮತ್ತು ಕರಾವಳಿಯನ್ನು ಸ್ವಚ್ಛಗೊಳಿಸುವುದು ಪುನೀತ ಸಾಗರ ಅಭಿಯಾನದ ಗುರಿಯಾಗಿದೆ.
ಇದುವರೆಗೆ ಪುನೀತ ಸಾಗರ ಅಭಿಯಾನದಡಿ 13 ಲಕ್ಷಕ್ಕೂ ಹೆಚ್ಚು ಎನ್ಸಿಸಿ ಕೆಡೆಟ್ಗಳು ಇದರಲ್ಲಿ ಭಾಗವಹಿಸಿ ಸುಮಾರು 208 ಟನ್ಗಳಷ್ಟು ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿದ್ದು, ಅದರಲ್ಲಿ 167 ಟನ್ಗಳನ್ನು ಮರುಬಳಕೆಗಾಗಿ ಕಳುಹಿಸಲಾಗಿದೆ ಎಂದು ಸಿಡಿಎಸ್ ಹೇಳಿದ್ದಾರೆ.
ವಿವಿಧ ಕ್ರೀಡಾಕೂಟಗಳಲ್ಲಿ ಅಸಾಧಾರಣ ಪ್ರದರ್ಶನ ನೀಡಿದ ಕೆಡೆಟ್ಗಳನ್ನು ಅವರು ಶ್ಲಾಘಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.