News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಬ್ದುಲ್‌ ರೆಹಮಾನ್‌ ಮಕ್ಕಿ ಜಾಗತಿಕ ಉಗ್ರ: UNSC ನಿರ್ಧಾರ ಸ್ವಾಗತಿಸಿದ ಭಾರತ

ನವದೆಹಲಿ: ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸಿದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರವನ್ನು ಭಾರತ ಶ್ಲಾಘಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಭಯೋತ್ಪಾದನೆಗೆ ಶೂನ್ಯ-ಸಹಿಷ್ಣು ವಿಧಾನವನ್ನು ಅನುಸರಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು.

ಭಯೋತ್ಪಾದನೆಯ ವಿರುದ್ಧ ವಿಶ್ವಾಸಾರ್ಹ, ಪರಿಶೀಲಿಸಬಹುದಾದ ಮತ್ತು ಬದಲಾಯಿಸಲಾಗದ ಕ್ರಮಗಳನ್ನು ಕೈಗೊಳ್ಳಲು ಭಾರತ ಅಂತರರಾಷ್ಟ್ರೀಯ ಸಮುದಾಯದ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸುತ್ತದೆ ಎಂದು ಅವರು ಹೇಳಿದರು.

ಭಯೋತ್ಪಾದಕ ಸಂಘಟನೆಗಳ ಬೆದರಿಕೆಗಳನ್ನು ಮೆಟ್ಟಿ ನಿಲ್ಲಲು ಮತ್ತು ಪ್ರದೇಶದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಕೆಡವಲು ಯುಎನ್‌ಎಸ್‌ಸಿಯ ಪಟ್ಟಿಗಳು ಮತ್ತು ನಿರ್ಬಂಧಗಳು  ಪರಿಣಾಮಕಾರಿ ಸಾಧನಗಳಾಗಿವೆ ಎಂದು ಅವರು ಹೇಳಿದರು.

ಮಕ್ಕಿ  ಎಲ್‌ಇಟಿಯಲ್ಲಿ ವಿವಿಧ ನಾಯಕತ್ವದ ಪಾತ್ರಗಳನ್ನು ವಹಿಸಿದ್ದಾನೆ, ಸಂಘಟನೆಗೆ ಹಣವನ್ನು ಸಂಗ್ರಹಿಸುವುದು ಸೇರಿದಂತೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಈತ ಎಲ್‌ಇಟಿ ನಾಯಕ ಹಫೀಜ್ ಸಯೀದ್‌ನ ಸೋದರ ಮಾವನೂ ಆಗಿದ್ದಾನೆ. ಹಫೀಜ್‌ ಮುಂಬೈ ದಾಳಿಯ ಮಾಸ್ಟರ್‌ ಮೈಂಡ್.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top