News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿ ದಾಳಿ ಸಂಚು: ಬಂಧಿತರಿಗೆ ಪಾಕಿಸ್ಥಾನಿ ಹ್ಯಾಂಡ್ಲರ್‌ಗಳ ಸಂಪರ್ಕ

ನವದೆಹಲಿ: ಗಣರಾಜ್ಯೋತ್ಸವಕ್ಕೂ ಮುನ್ನ ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಇಬ್ಬರನ್ನು ಉತ್ತರ ದೆಹಲಿಯ ಜಹಾಂಗೀರ್ಪುರಿಯಲ್ಲಿ ಜನವರಿ 12 ರಂದು ಬಂಧನಕ್ಕೆ ಒಳಪಡಿಸಲಾಗಿತ್ತು. ಇದೀಗ ಬಂಧಿತರಿಗೆ ಪಾಕಿಸ್ಥಾನಿ ಹ್ಯಾಂಡ್ಲರ್‌ಗಳ ಸಂಪರ್ಕವಿರುವುದು ದೃಢಪಟ್ಟಿದೆ.

ಬಂಧಿಸಲಾದ ಭಯೋತ್ಪಾದಕ ಶಂಕಿತ ನೌಶಾದ್ ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ನೌಶಾದ್‌ ಅನ್ನು ನೋಡಿಕೊಳ್ಳುತ್ತಿದ್ದ ಅಶ್ವಾಕ್ ಮತ್ತು ಸೊಹೈಲ್ ಭಯೋತ್ಪಾದಕ ಸಂಘಟನೆ (ಎಲ್‌ಇಟಿ) ಲಷ್ಕರ್-ಎ-ತೊಯ್ಬಾದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಭಯೋತ್ಪಾದಕ ಶಂಕಿತ ನೌಶಾದ್ ಎರಡು ಬಾರಿ ನೇಪಾಳಕ್ಕೆ ಹೋಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  ನೌಶಾದ್  ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿದ್ದಾಗ ಪಾಕಿಸ್ತಾನ ಮೂಲದ ಇಬ್ಬರು ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದ ಮತ್ತು ನಂತರ, ಅವನು 2018 ರಲ್ಲಿ ಬಿಡುಗಡೆಯಾದಾಗ, ಅಶ್ವಕ್ ಮತ್ತು ಸೊಹೈಲ್ ಅವರೊಂದಿಗಿನ ಅವನ ಸಂಪರ್ಕವು ಮತ್ತಷ್ಟು ಗಾಢವಾಯಿತು ಎನ್ನಲಾಗಿದೆ.

ಮೂಲಗಳ ಪ್ರಕಾರ, ನೌಶಾದ್ ನೇಪಾಳದ ಮೂಲಕ ಪಾಕಿಸ್ಥಾನಕ್ಕೆ ಹೋಗಲು ಪ್ರಯತ್ನಿಸಿದ್ದ ಆದರೆ ನೌಶಾದ್ ಅನ್ನು ಪಾಕಿಸ್ತಾನಕ್ಕೆ ಕಳುಹಿಸಲು ಪ್ರಯತ್ನಿಸಿದ ಅಧಿಕಾರಿಯನ್ನು ಲಂಚದ ಆರೋಪದ ಮೇಲೆ ಬಂಧಿಸಿದ್ದರಿಂದ ಪಾಕಿಸ್ತಾನಕ್ಕೆ ಹೋಗಲು ಆತನಿಗೆ ಸಾಧ್ಯವಾಗಲಿಲ್ಲ.

ಬಂಧಿತ ಮತ್ತೊಬ್ಬ ಉಗ್ರನನ್ನು ಜಗಜೀತ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇದೀಗ ಬಂಧನದಲ್ಲಿರುವ ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top