ನವದೆಹಲಿ: ಇಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಂಸ್ಥಾಪನಾ ದಿನವನ್ನು ಆಚರಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮೋದಿ ಸೇರಿದಂತೆ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವಿಟ್ ಮಾಡಿ, ಅತ್ಯಂತ ಸವಾಲಿನ ಸಂದರ್ಭಗಳಲ್ಲಿ ಜನರಿಗೆ ಸಹಾಯ ಮಾಡಲು ಎನ್ಡಿಆರ್ಎಫ್ ಶ್ಲಾಘನೀಯ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಅವರ ಧೈರ್ಯವು ಪ್ರಶಂಸನೀಯವಾಗಿದೆ ಎಂದಿದ್ದಾರೆ.
ಅಲ್ಲದೇ ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯವನ್ನು ನಿರ್ಮಿಸುವುದು ಸೇರಿದಂತೆ ವಿಪತ್ತು ನಿರ್ವಹಣಾ ಉಪಕರಣವನ್ನು ಬಲಪಡಿಸಲು ಭಾರತ ಅನೇಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಕೂಡ ಎನ್ಡಿಆರ್ಎಫ್ನ ಧೈರ್ಯಶಾಲಿ ಸಿಬ್ಬಂದಿಗೆ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಎನ್ಡಿಆರ್ಎಫ್ನ ಪ್ರಯಾಣವು ಧೈರ್ಯ ಮತ್ತು ವೃತ್ತಿಪರ ಶ್ರೇಷ್ಠತೆಯ ಬದ್ಧತೆಗೆ ಉದಾಹರಣೆ. ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಇತರರ ಜೀವ ಉಳಿಸುವ ಸಿಬ್ಬಂದಿಗೆ ಕಾರ್ಯಕ್ಕೆ ವಂದನೀಯ ಎಂದಿದ್ದಾರೆ.
Raising Day greetings to @NDRFHQ. They are making commendable efforts to assist people in the most challenging circumstances. Their bravery is admirable. India is making many efforts to strengthen disaster management apparatus including building disaster resilient infrastructure. pic.twitter.com/J0ArJWZ23y
— Narendra Modi (@narendramodi) January 19, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.