News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಲಬುರಗಿ: ತಾಂಡ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಪ್ರಧಾನಿ ಮೋದಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೇಡಂ ತಾಲೂಕಿನ ಮಳಖೇಡದಲ್ಲಿ ಹಕ್ಕು ಪತ್ರ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಸಾಂಕೇತಿಕವಾಗಿ ಐದು ಲಂಬಾಣಿ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.

ಈ ಸಮಾರಂಭದಲ್ಲಿ ಕಂದಾಯ ಗ್ರಾಮಗಳ ತಾಂಡ ನಿವಾಸಿಗಳು ಮತ್ತು ಅರ್ಹ ಫಲಾನುಭವಿಗಳಿಗೆ ಏಕಕಾಲಕ್ಕೆ 50 ಸಾವಿರ ಹಕ್ಕು ಪತ್ರ ವಿತರಣೆ ಮಾಡಲಾಗಿದೆ.

ಇದಕ್ಕೂ ಮುನ್ನ ಬಂಜಾರ ಸಮುದಾಯದ ಸಾಂಪ್ರದಾಯಿಕ ಶಾಲುಗಳನ್ನು ಹಾಕಿ ಪ್ರಧಾನಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸಿದರು. ಬಂಜಾರ ಸಮುದಾಯದ ಮಹಿಳೆ ಕಸೂತಿ ಮಾಡುತ್ತಿರುವ ಪ್ರತಿಮೆಯ ಸ್ಮರಣೆಕೆಯನ್ನು ಮೋದಿಗೆ ನೀಡಲಾಯಿತು. ಅಲ್ಲದೆ ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪದ ಸ್ಮರಣಿಕೆಯನ್ನು ಕೂಡ ಈ ಸಂದರ್ಭದಲ್ಲಿ ಮೋದಿ ಅವರಿಗೆ ನೀಡಲಾಯಿತು. ಸಮಾರಂಭದಲ್ಲಿ ನಗಾರಿ ಬಾರಿಸುವ ಮೂಲಕ ಮೋದಿ ಎಲ್ಲರ ಗಮನ ಸೆಳೆದರು.

ಬಳಿಕ ಮಾತನಾಡಿದ ಮೋದಿ, “ಕರ್ನಾಟಕ ರಾಜ್ಯದ ತಾಂಡಾದ ಬಂಜಾರ, ನಾಯ, ಕಾರಬಾರಿ, ಗುಮಂತು ಸಮುದಾಯವದವರಿಗೆ ಕೈ ಮುಗಿಯುತ್ತೇನೆ. ಸಂವಿಧಾನದ ಅಂಶಗಳನ್ನು ಅನುಷ್ಠಾನಕ್ಕೆ ತರಲಾದ ಜನವರಿಯ ಪವಿತ್ರ ತಿಂಗಳಲ್ಲಿ ಕರ್ನಾಟಕ ಸರ್ಕಾರವು ಸಾಮಾಜಿಕ ನ್ಯಾಯದ ವಿಷಯದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಇದು ಬಂಜಾರ ಸಮುದಾಯದವರಿಗೆ ದೊಡ್ಡ ದಿನವಾಗಿದೆ. 51,000 ಕುಟುಂಬದವರಿಗೆ ಮೊದಲ ಬಾರಿಗೆ ಅವರ ಮನೆಯ ಹಕ್ಕು ಪತ್ರ ಸಿಗಲಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top