ನವದೆಹಲಿ: ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಮೇಲೆ ಇತ್ತೀಚೆಗೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.
ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ” ಆಸ್ಟ್ರೇಲಿಯದ ಕ್ಯಾರಮ್ ಡೌನ್ಸ್ನಲ್ಲಿರುವ ಶ್ರೀ ಶಿವ ವಿಷ್ಣು ದೇವಾಲಯದ ಜೊತೆಗೆ ಇತ್ತೀಚಿನ ದಿನಗಳಲ್ಲಿ ಇತರ ದೇಗುಲಗಳ ಮೇಲೆ ನಡೆದ ದಾಳಿಯನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದಿದ್ದಾರೆ.
“ಮೆಲ್ಬೋರ್ನ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಕ್ಯಾರಮ್ ಡೌನ್ಸ್ನ ಸ್ಥಳೀಯ ಪೊಲೀಸರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ವಿರುದ್ಧ ತ್ವರಿತ ತನಿಖೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವಂತೆ ವಿನಂತಿಸಿದ್ದಾರೆ” ಎಂದು ಬಾಗ್ಚಿ ಹೇಳಿದ್ದಾರೆ.
“ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ಒಂದೆರಡು ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ ಎಂದು ನಮಗೆ ತಿಳಿದಿದೆ. ಈ ಕ್ರಮಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಕೃತ್ಯಗಳನ್ನು ಆಸ್ಟ್ರೇಲಿಯಾದ ನಾಯಕರು, ಸಮುದಾಯ ಮುಖಂಡರು ಮತ್ತು ಧಾರ್ಮಿಕ ಸಂಘಗಳು ಸಾರ್ವಜನಿಕವಾಗಿ ಖಂಡಿಸಿವೆ” ಎಂದಿದ್ದಾರೆ.
ಖಾಲಿಸ್ತಾನ್ ಬೆಂಬಲಿಗರು ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದಾರೆ ಎಂದು ಹೇಳಲಾಗಿದೆ.
ಮೆಲ್ಬೋರ್ನ್ ಹಿಂದೂ ಸಮುದಾಯದ ಸದಸ್ಯ ಸಚಿನ್ ಮಹಾತೆ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದು, “ಈ ಖಲಿಸ್ತಾನ್ ಬೆಂಬಲಿಗರಿಗೆ ಧೈರ್ಯವಿದ್ದರೆ ಅವರು ಶಾಂತಿಯುತ ಹಿಂದೂ ಸಮುದಾಯದ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸುವ ಬದಲು ವಿಕ್ಟೋರಿಯನ್ ಸಂಸತ್ತಿನ ಕಟ್ಟಡದ ಮೇಲೆ ಗೀಚುಬರಹ ಬರೆಯಬೇಕು” ಎಂದಿದ್ದಾರೆ.
We are aware that a couple of temples have recently been vandalised in Australia. We strongly condemn these actions. These actions have also been publically condemned by Australian leaders, community leaders and religious associations there: MEA Spokesperson Arindam Bagchi pic.twitter.com/qXyCgQbSZs
— ANI (@ANI) January 19, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.